ಚಾಮರಾಜನಗರ

ಹನೂರಿನಲ್ಲಿ ಕಳ್ಳತನ ಪ್ರಕರಣ: ಚಿನ್ನದೊರೆ ನಿವಾಸಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ

ಹನೂರು: ಪಟ್ಟಣದ ಚಿನ್ನದೊರೆ ಎಂಬುವವರ ಮನೆಯಲ್ಲಿ ನಗದು ಹಾಗೂ ಚಿನ್ನ ಕಳ್ಳತನವಾಗಿದ್ದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅವರು, ಚಿನ್ನದೊರೆ ನಿವಾಸಕ್ಕೆ ಭೇಟಿ ನೀಡಿ ಘಟನೆಯ ಸಂಬಂಧ ಮಾಹಿತಿ ಪಡೆದುಕೊಂಡು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಪರಿಶೀಲನೆ ನಂತರ ಆರ್.ನರೇಂದ್ರ ಅವರು, ದೂರವಾಣಿ ಮುಖಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾರನ್ನು ಸಂಪರ್ಕಿಸಿ ತನಿಖೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿಯೇ ಇದುವರೆಗೂ ಇಷ್ಟು ದೊಡ್ಡ ಮಟ್ಟದಲ್ಲಿ ಕಳ್ಳತನವಾಗಿರಲಿಲ್ಲ. ಇದೀಗ ಹನೂರು ಪಟ್ಟಣದಲ್ಲಿ ಕಳ್ಳತನ ನಡೆದಿರುವುದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಈಗಾಗಲೇ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಳ್ಳತನ ಪ್ರಕರಣವನ್ನು ಆದಷ್ಟು ಬೇಗ ಭೇದಿಸಿ ನಗದು ಹಾಗೂ ಚಿನ್ನವನ್ನು ಪತ್ತೆ ಹಚ್ಚುವಂತೆ ತಿಳಿಸಿದ್ದೇನೆ. ಈ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಈಗಾಗಲೇ ವಿಶೇಷ ತಂಡ ರಚನೆಯಾಗಿರುವುದು ತಿಳಿದು ಬಂದಿದೆ. ನಮ್ಮ ರಾಜ್ಯದ ಪೊಲೀಸರು ಇದಕ್ಕಿಂತಲೂ ವಿಭಿನ್ನವಾಗಿರುವ ಪ್ರಕರಣಗಳನ್ನು ಭೇದಿಸಿ ಇಡೀ ದೇಶದಲ್ಲಿಯೇ ಮನೆ ಮಾತಾಗಿದ್ದಾರೆ. ಈ ಪ್ರಕರಣವು ಸುಖಾಂತ್ಯ ಕಂಡು ನೊಂದವರಿಗೆ ನ್ಯಾಯ ಕೊಡಿಸುವ ಮೂಲಕ ರಾಜ್ಯದ ಪೊಲೀಸರು ಇತರೆ ರಾಜ್ಯದವರಿಗೆ ಮಾದರಿಯಾಗಲಿ ಎಂದರು.

ಘಟನೆಯ ಸಂಬಂಧ ಚಿನ್ನದೊರೆ ಮಾತನಾಡಿ, ನನ್ನ ಮೂರನೇ ಮಗಳು ದರ್ಶಿನಿ ರಾಜಸ್ಥಾನದ ಜೈಪುರ್‌ನಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಬರುವ ಸಂಬಳವನ್ನು ನಮಗೆ ಕಳುಹಿಸುತ್ತಿದ್ದರು. ನಾವು ನಮ್ಮ ಊರಿನಲ್ಲಿದ್ದ ಜಮೀನು ಮಾರಾಟ ಮಾಡಿ ಮನೆಯಲ್ಲಿ 20 ಲಕ್ಷ ನಗದು ಹಾಗೂ ಮದುವೆಗೆ ಚಿನ್ನ ಖರೀದಿ ಮಾಡಿ ಮನೆಯಲ್ಲಿ ಇಟ್ಟಿದ್ದೆವು. ನಮ್ಮ ಸಂಬಂಧಿಕರ ಕಾರ್ಯಕ್ರಮ ಇದ್ದ ಹಿನ್ನೆಲೆ ತಮಿಳುನಾಡಿಗೆ ತೆರಳಿ ವಾಪಸ್ ಮಧ್ಯರಾತ್ರಿ ಮನೆಗೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂತು ಎಂದು ಘಟನೆ ಬಗ್ಗೆ ವಿವರಿಸಿದರು.

ಭೇಟಿಯ ವೇಳೆ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಾದೇಶ್, ಮುಖಂಡರಾದ ರಮೇಶ್ ನಾಯ್ಡು, ಮಾದೇಶ್, ರಾಜೇಶ್, ಪ್ರದೀಪ್ ನಾಯ್ಡು, ನಾಗೇಶ್, ವೆಂಕಟೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

3 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

3 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

3 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

3 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago