ಚಾಮರಾಜನಗರ

ಹನೂರು ಪಟ್ಟಣವನ್ನು ಜಿಲ್ಲೆಯಲ್ಲಿಯೇ ಮಾದರಿ ಪಟ್ಟಣವನ್ನಾಗಿ ಮಾಡಬೇಕು: ಶಾಸಕ ಎಂ.ಆರ್.ಮಂಜುನಾಥ್‌

ಹನೂರು: ಕೇಂದ್ರ ಪುರಸ್ಕೃತ ಅಮೃತ್.‌2ರ ಯೋಜನೆಯಡಿ 9 ಕೋಟಿ ವೆಚ್ಚದಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು, ಸದಸ್ಯರುಗಳು ಪಕ್ಷಾತೀತವಾಗಿ ಸಹಕಾರ ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ.

ಹನೂರು ಪಟ್ಟಣ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹನೂರು ಪಟ್ಟಣವನ್ನು ಜಿಲ್ಲೆಯಲ್ಲಿಯೇ ಮಾದರಿ ಪಟ್ಟಣವನ್ನಾಗಿ ಮಾಡಲು ನನ್ನದೇ ಆದ ಕನಸು ಇಟ್ಟುಕೊಂಡಿದ್ದೇನೆ .ಈ ಯೋಜನೆ ಯಶಸ್ವಿಯಾಗಲು ಪಟ್ಟಣ ಪಂಚಾಯಿತಿ ಸದಸ್ಯರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಹನೂರು ಪಟ್ಟಣಕ್ಕೆ ಯಾವುದೇ ಸಂದರ್ಭದಲ್ಲಿಯೂ ದಿನದ 24 ಗಂಟೆಯೂ ಕಾವೇರಿ ಕುಡಿಯುವ ನೀರು ಪೂರೈಕೆ ಮಾಡಲು, ಹೊಸ ಕಚ್ಚಾ ನೀರಿನ ಯಂತ್ರಗಳ ಅಳವಡಿಕೆ, ಜಲ ಶುದ್ಧೀಕರಣ ಘಟಕದಲ್ಲಿ ಹೊಸ ಶುದ್ಧ ನೀರಿನ ಯಂತ್ರಗಳನ್ನು ಅಳವಡಿಕೆ ಮಾಡಲಾಗುತ್ತಿದೆ. ಜಲ ಸಂಗ್ರಹಗಾರದಿಂದ ಡಿಐ ಕೊಳವೆ ಮಾರ್ಗದ ಅಳವಡಿಕೆ ಮಾಡಲಾಗುತ್ತಿದೆ. ಸದ್ಯದಲ್ಲೇ ಆರ್.ಎಸ್. ದೊಡ್ಡಿಯಲ್ಲಿನ ಶಿಥಿಲಗೊಂಡಿರುವ ಟ್ಯಾಂಕ್ ಕೆಡವಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ವಿನೂತನ ಮಾದರಿಯ ಜಲಸಂಗ್ರಹಗಾರ ನಿರ್ಮಾಣ ಮಾಡಲಾಗುವುದು ಎಂದರು.

ಅಮೃತ ನಗರೋತ್ಥಾನ 4ರ ಕಾರ್ಯಕ್ರಮದಡಿ ಹನೂರು ಪಟ್ಟಣದ ನೀರು ಸರಬರಾಜು ವ್ಯವಸ್ಥೆಯಡಿ ಸಿದ್ದಯ್ಯನಪುರ ಗ್ರಾಮದ ಬಳಿ ಇರುವ ನೀರು ಶುದ್ಧೀಕರಣ ಘಟಕದ ದುರಸ್ತಿ ಹಾಗೂ ಪುನಃಶ್ಚೇತನ ಕಾಮಗಾರಿಯನ್ನು 67 ಲಕ್ಷ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಕೆಂಪೇಗೌಡ ವೃತ್ತ ಅನುಮೋದನೆಗೆ ಪ್ರಾಮಾಣಿಕ ಪ್ರಯತ್ನ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಜ್ಜೀಪುರ ಹಾಗೂ ಎಲ್ಲೇಮಾಳ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ವೃತ್ತಕ್ಕೆ ಈಗಾಗಲೇ ನಾಡಪ್ರಭು ಕೆಂಪೇಗೌಡರ ವೃತ್ತ ಎಂದು ನಾಮಕರಣ ಮಾಡಲು ಅನುಮೋದನೆಗಾಗಿ ಕಳುಹಿಸಿಕೊಡಲಾಗಿದೆ. ಈ ತಿಂಗಳ ಅಂತ್ಯದೊಳಗೆ ಅನುಮೋದನೆ ಕೊಡಿಸಿ ಶಾಶ್ವತವಾಗಿ ನಾಡಪ್ರಭು ಕೆಂಪೇಗೌಡ ವೃತ್ತ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಈ ಸ್ವತ್ತು ಆಂದೋಲನ ಕಾರ್ಯಕ್ರಮ: ಪಟ್ಟಣ ವ್ಯಾಪ್ತಿಯಲ್ಲಿರುವ ನಿವಾಸಿಗಳಿಗೆ ಪಟ್ಟಣ ಪಂಚಾಯಿತಿಯಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತಿದೆ. ಅದೇ ರೀತಿ ಈ ಸ್ವತ್ತು ನೀಡಬೇಕಿದೆ. ಆದರೆ ಹಲವಾರು ಸಮಸ್ಯೆಗಳು ಇರುವುದರಿಂದ ಸಮಸ್ಯೆಗಳನ್ನು ಬಗೆಹರಿಸಿ ಪ್ರತಿ ವಾರ್ಡ್ ಗಳಲ್ಲಿ ಈ ಸ್ವತ್ತು ಆಂದೋಲನ ಮಾಡಿ ಪ್ರತಿಯೊಬ್ಬರಿಗೂ ಈ ಸ್ವತ್ತು ನೀಡಲು ಕ್ರಮವಹಿಸಲಾಗುವುದು. ಇದಲ್ಲದೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯನ್ನು ನಿಗದಿಪಡಿಸುವುದು. ಗ್ರಾಮ ಠಾಣಾ ಗುರುತಿಸಿ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಂದಾಯ ಜಮೀನಿಗೆ ಯಾವ ರೀತಿ ಈ ಸ್ವತ್ತು ಕೊಡಬಹುದು ಎಂದು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಇನ್ನು ಆಶಯ ಬೆಳವಣಿಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದನ್ನು ಬಗೆಹರಿಸಲು ಈಗಾಗಲೇ ಕಮಿಟಿ ರಚನೆ ಮಾಡಲಾಗಿದೆ. ಕಮಿಟಿಯ ಸದಸ್ಯರುಗಳು ಅಂತಿಮವಾಗಿ ವರದಿ ನೀಡಿದ ನಂತರ ಇಲ್ಲಿನ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಸಿಬ್ಬಂದಿಗಳ ಸಮಸ್ಯೆಗೆ ಪರಿಹಾರ: ಪಟ್ಟಣ ಪಂಚಾಯಿತಿಯಲ್ಲಿ ಪ್ರಥಮ ದರ್ಜೆ ಸಹಾಯಕರು ಸಮುದಾಯ ಸಂಘಟನಾಧಿಕಾರಿ ಅಭಿಯಂತರರು ಸೇರಿ 15 ಸ್ಥಾನಗಳು ಖಾಲಿ ಇರುವುದರಿಂದ ಪಟ್ಟಣ ಪಂಚಾಯಿತಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಈ ಸಂಬಂಧ ಸರ್ಕಾರದ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸಿದ್ದು ಆದಷ್ಟು ಬೇಗ ಸಿಬ್ಬಂದಿಗಳನ್ನು ನೇಮಕ ಮಾಡಲು ಕ್ರಮವಹಿಸಲಾಗುವುದು ಎಂದರು.

ಪೌರಕಾರ್ಮಿಕರ ನೇಮಕ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 13 ವಾರ್ಡಗಳಿದ್ದು ಏಳು ಜನ ಕಾಯಂ ಪೌರಕಾರ್ಮಿಕರು ಮಾತ್ರ ಇರುವುದರಿಂದ ಸ್ವಚ್ಛತೆಗೆ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ 8 ಮಂದಿ ಪೌರಕಾರ್ಮಿಕ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸಭೆಯಲ್ಲಿ ನಿರ್ಣಯ ಮಾಡಲಾಗಿದೆ ಎಂದರು.

ಇನ್ನು ಪಟ್ಟಣದ ಹೆಚ್ ನಾಗಪ್ಪ ವೃತ್ತದಲ್ಲಿ ಶ್ರೀ ಬಸವೇಶ್ವರ ಪ್ರತಿಮೆ ಇಡಲು ಸಮಾಜದವರು ಮನವಿ ನೀಡಿದ್ದಾರೆ. ಈ ವಿಚಾರವನ್ನು ಸುಧೀರ್ಘವಾಗಿ ಚರ್ಚೆ ನಡೆಸಿ ಸೂಕ್ತ ನಿರ್ಣಯ ತೆಗೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪ.ಪಂ ಅಧ್ಯಕ್ಷೆ ಮಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್, ಸದಸ್ಯರಾದ ಹರೀಶ್, ಗಿರೀಶ್, ಸುದೇಶ್, ಸೋಮಶೇಖರ್, ಸಂಪತ್, ಮಹೇಶ್ ನಾಯಕ, ಮಹೇಶ್, ಪವಿತ್ರ, ರೂಪ, ಮಂಜುಳಾ ಮುಖ್ಯಾಧಿಕಾರಿ ಅಶೋಕ್, ಪ್ರಭಾರ ಅಭಿಯಂತರ ನಾಗೇಂದ್ರ, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಭರತ್, ಮದನ್, ಪ್ರತಾಪ್, ನಾಗೇಂದ್ರ, ದೇವಿಕಾ, ಸುಷ್ಮಾ, ಶ್ರೀನಿವಾಸ್, ರಾಕೇಶ್, ಶರತ್, ಸುನಿಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

1 hour ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

2 hours ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

2 hours ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

2 hours ago

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

3 hours ago