ಚಾಮರಾಜನಗರ

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ ಸ್ವರ್ಣಕಲ್ಲಿನ ದೇವಾಲಯ ಅದ್ದೂರಿಯಾಗಿ ಲೋಕಾರ್ಪಣೆಗೊಂಡಿತು ಫೆ10 2026 ಕ್ಕೆ ದೇವಸ್ಥಾನ ಲೋಕಾರ್ಪಣೆ ಗೊಂಡು ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಹಸಗೂಲಿ ಗ್ರಾಮದಲ್ಲಿ ಒಂದು ವರ್ಷದ ಆರಾಧನೆ ಮಹೋತ್ಸವ ಏರ್ಪಡಿಸಲಾಗಿದೆ.

ತಾಲ್ಲೂಕಿನ ಪ್ರಸಿದ್ದ ಜಾತ್ರೆ ನಡೆಯುವ ಶ್ರೀ ಅಲ್ಲಹಳ್ಳಿ ಪಾರ್ವತಾಂಭೆಯ ದೇವಸ್ಥಾನದ ಮೊದಲ ವರ್ಷದ ಆರಾಧನೆ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭಾಗಿಯಾಗುವಂತೆ ಶ್ರೀ ಪಾರ್ವತಾಂಭೆ ಜಾತ್ರಾ ಸಮಿತಿಯವರು ಕೋರಿದ್ದಾರೆ.

ಕಾರ್ಯಕ್ರಮದಲ್ಲಿ ಸುಮಾರು ಐವತ್ತು ಸಾವಿರ ಭಕ್ತರು ಸೇರುವ ಹಿನ್ನಲೆ ಎಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಿಸಲಾಗಿದೆ ಅಲ್ಲದೆ ಶ್ರೀ ಸಚ್ಚಿದಾನಂದ ಸೇವಾ ಟ್ರಸ್ಟ್ ನ ಅಧ್ಯಕ್ಷ ಸಚ್ಚಿದಾನಂದ ರವರು ಮಾಜಿ ಬಿಗ್ ಬಾಸ್ ಸ್ಪರ್ದಿ ಹಾಗೂ ಹಳ್ಳಿಕಾರ್ ಒಡೆಯ ಎಂದು ಹೆಸರುಗಳಿಸಿರುವ ವರ್ತೂರ್ ಸಂತೋಷ್, ಹಾಗೂ ಕನ್ನಡ ಚಲನಚಿತ್ರ ರಂಗದ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಅವರನ್ನು ಕರೆಸುತಿದ್ದು, ಜೊತೆಗೆ ಅಂತರಾಷ್ಟ್ರೀಯ ಜಾನಪದ ಕಲಾವಿದ ಅಮ್ಮ ರಾಮಚಂದ್ರ ಅವರನ್ನು ಅರಾಧನ ಮಹೋತ್ಸವ ಕ್ಕೆ ಕರೆಸುತಿದ್ದಾರೆ.

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಬಹುಮಾನ:
ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ಜಾನುವಾರುಗಳ ಪ್ರೀತಿಯ ದೇವರು ಎಂತಹ ರೋಗರುಜಿನೆ ಇದ್ದರೂ ಹರಕೆ ತೊಟ್ಟು ಪಂಜು ಹಚ್ಚಿದಿದರೆ ಎಲ್ಲವೂ ಗುಣವಾಗುವ ನಂಬಿಕೆ ಹಾಗಾಗಿ ಹಸಗೂಲಿ ಜಾತ್ರೆತನ್ನು ದನಗಳ ಜಾತ್ರೆ ಎಂತಲು ಕರೆಯುವ ವಾಡಿಕೆ ಈ ಹಿನ್ನಲೆಯಲ್ಲಿ ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಏರ್ಪಡಿಸಿದ್ದು ಬಾಗಿಯಾಗುವ ಉತ್ತಮ ಜೋಡೆತ್ತುಗಳಿಗೆ ಪ್ರಥಮ ಬಹುಮಾನ ಇಪ್ಪತ್ತು ಸಾವಿರ, ದ್ವಿತೀಯ ಬಹುಮಾನ ಹದಿನೈದು ಸಾವಿರ, ತೃತೀಯ ಬಹುಮಾನ ಹತ್ತು ಸಾವಿರ ರೂಗಳು ನೀಡಲಾಗುವುದು ಹಾಗೂ ಭಾಗಿಯಾಗುವ ಎಲ್ಲಾ ರೈತರಿಗೂ ಸಮಾಧಾನಕರ ಬಹುಮಾನ ನೀಡಲಾಗುವುದು.

ಹಳ್ಳಿಕಾರ್ ಜೊಡೆತ್ತು ಪ್ರದರ್ಶನ ಕ್ಕೆ ಬರುವ ಆಸಕ್ತ ರೈತರು ನಂ 12 ಸುರಭಿ ಹೋಟೆಲ್ ರಸ್ತೆ , ದ,ರಾ ಬೇಂದ್ರ ನಗರ ಗುಂಡ್ಲುಪೇಟೆ ಟೌನ್, ದೂ.ಸಂ 8050833123, 7975330155 ಗೆ ಸಂಪರ್ಕಿಸುವಂತೆ ಕೋರಲಾಗಿದ್ದು ಗುಂಡ್ಲುಪೇಟೆ ತಾಲ್ಲೂಕಿನ ಹಳ್ಳಿಕಾರ್ ಜೋಡೆತ್ತುಗಳಿಗೆ ಮಾತ್ರ ಆದ್ಯತೆ.

ಆಂದೋಲನ ಡೆಸ್ಕ್

Recent Posts

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

40 mins ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

50 mins ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

1 hour ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

1 hour ago

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಗೀಳು : ಡಿಜಿಟಲ್‌ ಲಾಕ್‌ ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…

2 hours ago

ಎಸ್‌ಸಿಪಿ,ಟಿಎಸ್‌ಪಿ ಅನುದಾನ ಗ್ಯಾರಂಟಿಗೆ ಬಳಕೆ : ಕಾಂಗ್ರೆಸ್‌ನಲ್ಲೇ ಅಸಮಾಧಾನ

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…

2 hours ago