ಚಾಮರಾಜನಗರ

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ ಸ್ವರ್ಣಕಲ್ಲಿನ ದೇವಾಲಯ ಅದ್ದೂರಿಯಾಗಿ ಲೋಕಾರ್ಪಣೆಗೊಂಡಿತು ಫೆ10 2026 ಕ್ಕೆ ದೇವಸ್ಥಾನ ಲೋಕಾರ್ಪಣೆ ಗೊಂಡು ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಹಸಗೂಲಿ ಗ್ರಾಮದಲ್ಲಿ ಒಂದು ವರ್ಷದ ಆರಾಧನೆ ಮಹೋತ್ಸವ ಏರ್ಪಡಿಸಲಾಗಿದೆ.

ತಾಲ್ಲೂಕಿನ ಪ್ರಸಿದ್ದ ಜಾತ್ರೆ ನಡೆಯುವ ಶ್ರೀ ಅಲ್ಲಹಳ್ಳಿ ಪಾರ್ವತಾಂಭೆಯ ದೇವಸ್ಥಾನದ ಮೊದಲ ವರ್ಷದ ಆರಾಧನೆ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭಾಗಿಯಾಗುವಂತೆ ಶ್ರೀ ಪಾರ್ವತಾಂಭೆ ಜಾತ್ರಾ ಸಮಿತಿಯವರು ಕೋರಿದ್ದಾರೆ.

ಕಾರ್ಯಕ್ರಮದಲ್ಲಿ ಸುಮಾರು ಐವತ್ತು ಸಾವಿರ ಭಕ್ತರು ಸೇರುವ ಹಿನ್ನಲೆ ಎಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಿಸಲಾಗಿದೆ ಅಲ್ಲದೆ ಶ್ರೀ ಸಚ್ಚಿದಾನಂದ ಸೇವಾ ಟ್ರಸ್ಟ್ ನ ಅಧ್ಯಕ್ಷ ಸಚ್ಚಿದಾನಂದ ರವರು ಮಾಜಿ ಬಿಗ್ ಬಾಸ್ ಸ್ಪರ್ದಿ ಹಾಗೂ ಹಳ್ಳಿಕಾರ್ ಒಡೆಯ ಎಂದು ಹೆಸರುಗಳಿಸಿರುವ ವರ್ತೂರ್ ಸಂತೋಷ್, ಹಾಗೂ ಕನ್ನಡ ಚಲನಚಿತ್ರ ರಂಗದ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಅವರನ್ನು ಕರೆಸುತಿದ್ದು, ಜೊತೆಗೆ ಅಂತರಾಷ್ಟ್ರೀಯ ಜಾನಪದ ಕಲಾವಿದ ಅಮ್ಮ ರಾಮಚಂದ್ರ ಅವರನ್ನು ಅರಾಧನ ಮಹೋತ್ಸವ ಕ್ಕೆ ಕರೆಸುತಿದ್ದಾರೆ.

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಬಹುಮಾನ:
ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ಜಾನುವಾರುಗಳ ಪ್ರೀತಿಯ ದೇವರು ಎಂತಹ ರೋಗರುಜಿನೆ ಇದ್ದರೂ ಹರಕೆ ತೊಟ್ಟು ಪಂಜು ಹಚ್ಚಿದಿದರೆ ಎಲ್ಲವೂ ಗುಣವಾಗುವ ನಂಬಿಕೆ ಹಾಗಾಗಿ ಹಸಗೂಲಿ ಜಾತ್ರೆತನ್ನು ದನಗಳ ಜಾತ್ರೆ ಎಂತಲು ಕರೆಯುವ ವಾಡಿಕೆ ಈ ಹಿನ್ನಲೆಯಲ್ಲಿ ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಏರ್ಪಡಿಸಿದ್ದು ಬಾಗಿಯಾಗುವ ಉತ್ತಮ ಜೋಡೆತ್ತುಗಳಿಗೆ ಪ್ರಥಮ ಬಹುಮಾನ ಇಪ್ಪತ್ತು ಸಾವಿರ, ದ್ವಿತೀಯ ಬಹುಮಾನ ಹದಿನೈದು ಸಾವಿರ, ತೃತೀಯ ಬಹುಮಾನ ಹತ್ತು ಸಾವಿರ ರೂಗಳು ನೀಡಲಾಗುವುದು ಹಾಗೂ ಭಾಗಿಯಾಗುವ ಎಲ್ಲಾ ರೈತರಿಗೂ ಸಮಾಧಾನಕರ ಬಹುಮಾನ ನೀಡಲಾಗುವುದು.

ಹಳ್ಳಿಕಾರ್ ಜೊಡೆತ್ತು ಪ್ರದರ್ಶನ ಕ್ಕೆ ಬರುವ ಆಸಕ್ತ ರೈತರು ನಂ 12 ಸುರಭಿ ಹೋಟೆಲ್ ರಸ್ತೆ , ದ,ರಾ ಬೇಂದ್ರ ನಗರ ಗುಂಡ್ಲುಪೇಟೆ ಟೌನ್, ದೂ.ಸಂ 8050833123, 7975330155 ಗೆ ಸಂಪರ್ಕಿಸುವಂತೆ ಕೋರಲಾಗಿದ್ದು ಗುಂಡ್ಲುಪೇಟೆ ತಾಲ್ಲೂಕಿನ ಹಳ್ಳಿಕಾರ್ ಜೋಡೆತ್ತುಗಳಿಗೆ ಮಾತ್ರ ಆದ್ಯತೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

9 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

9 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

9 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

9 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

9 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

12 hours ago