ಚಾಮರಾಜನಗರ

ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಹನೂರು: ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಕರುನಾಡ ವಿಜಯಸೇನೆ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.

ಮಂಗಳವಾರ ರಾತ್ರಿ ಪಿ ಜಿ ಪಾಳ್ಯ ಗ್ರಾಮ ಸಮೀಪ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ತೀವ್ರ ಗಾಯಗೊಂಡಿದ್ದರು. ಗಾಯಗೊಂಡಿದ್ದ ಮೂವರನ್ನು ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು,ಸಿಬ್ಬಂದಿಗಳು ಯಾರೂ ಇರಲಿಲ್ಲ ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ತಡರಾತ್ರಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಇದಲ್ಲದೆ ತುರ್ತು ವಾಹನವಿದ್ದರೂ ಚಾಲಕನಿಲ್ಲದ ಪರಿಣಾಮ ಗಾಯಗೊಂಡಿದ್ದ ಮೂವರನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗದೆ ಖಾಸಗಿ ವಾಹನದಲ್ಲಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.

ಪರಿವರ್ತನಾ ಅರಣ್ಯ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಮಾತನಾಡಿ ಪಿ ಜಿ ಪಾಳ್ಯ ಗ್ರಾಮದಲ್ಲಿ ಸುಸಜ್ಜಿತ ಆಸ್ಪತ್ರೆ ಇದೆ ಆದರೆ ನುರಿತ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಲ್ಲದ ಪರಿಣಾಮ ರೋಗಿಗಳು ಪರಿತಪಿಸುವಂತಾಗಿದೆ .ಈ ಬಗ್ಗೆ ಸ್ಥಳೀಯ ಶಾಸಕರು, ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಅವರಿಗೆ ಹತ್ತಾರು ಬಾರಿ ಮನವಿ ಸಲ್ಲಿಸಲಾಗಿದ್ದರೂ ಸಹ ನುರಿತ ಸಿಬ್ಬಂದಿಗಳನ್ನು ನೇಮಕ ಮಾಡಿಲ್ಲ,ಉನ್ನತ ಗ್ರಾಮದ ಸಮೀಪ ಕೆಎಸ್ ಆರ್ ಟಿಸಿ ಬಸ್ ಪಲ್ಟಿ ಆದ ಸಂದರ್ಭದಲ್ಲೂ ಸಹ ಚಿಕಿತ್ಸೆ ದೊರಕದೆ ಮೂವರು ಮೃತಪಟ್ಟಿದ್ದಾರೆ ಇಷ್ಟಾದರೂ ಸಹ ಸರಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ 1ವಾರದೊಳಗೆ ನುರಿತ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕರುನಾಡ ವಿಜಯ ಸೇನೆ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ ರಾಜ್ಯದಲ್ಲಿ ಆರೋಗ್ಯ ಸಚಿವ ಸುಧಾಕರ್ ಅವರು ತಮ್ಮ ಖಾತೆಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಈಗಾಗಲೇ ಸರಿಯಾದ ಚಿಕಿತ್ಸೆ ಸಿಗದೆ ತಾಯಿ 2 ಹಸುಗೂಸುಗಳು ಮೃತಪಟ್ಟ ಘಟನೆ ಮಾಸುವ ಮುನ್ನವೇ ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಇರೋದು ಅಮಾನವೀಯ ಸಂಗತಿ. ಈ ಕೂಡಲೇ ಸಂಬಂಧಪಟ್ಟ ಆರೋಗ್ಯ ಸಚಿವರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜಪ್ಪ,ಗ್ರಾಮ ಪಂಚಾಯಿತಿ ಸದಸ್ಯ ನಿಂಗಯ್ಯ ಕರುನಾಡ ವಿಜಯಸೇನೆ ಸದಸ್ಯರುಗಳು ಗ್ರಾಮಸ್ಥರು ಹಾಜರಿದ್ದರು

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

5 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

6 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

6 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

6 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

7 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

16 hours ago