ಕೊಳ್ಳೇಗಾಲ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಎಸ್.ಜಯಣ್ಣ ಅವರು ಇಂದು(ಡಿ.10) ತೀವ್ರ ಎದೆನೋವಿನಿಂದ ಬಳಲುತ್ತಿದ್ದರು, ಈ ಕಾರಣಕ್ಕೆ ಅವರನ್ನು ಸಮೀಪದ ಜನನಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲಿಯೇ ಕೊನೆ ಉಸಿರೆಳಿದ್ದಾರೆ. ಅವರು ರಸ್ತೆ ಮಾರ್ಗವಾಗಿ ಆಸ್ಪತ್ರೆಗೆ ಬರುವ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಮೃತ ಎಸ್.ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು, ಕೊಳ್ಳೇಗಾಲ ವಿಧಾನಸಭಾಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಅವರು ಈ ಭಾಗದ ಪ್ರಭಾವಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಜಯಣ್ಣ ಅವರ ಮನೆಯ ಗೃಹ ಪ್ರವೇಶಕ್ಕೆ ಭೇಟಿ ನೀಡಿದ್ದರು.
ಎಸ್.ಜಯಣ್ಣನವರು ಇಂದು ಮಧ್ಯಾಹ್ನ ಸಾವನ್ನಪ್ಪಿರುವ ಕಾರಣ ನಾಳೆ(ಡಿ.11) ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…