ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಅವಾಂತರಗಳು ಸೃಷ್ಟಿಯಾಗಿವೆ.
ಕಳೆದ ನಾಲ್ಕು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ಭಾಗದಲ್ಲಿ ಕೆರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಕೆರೆಯೊಂದು ತುಂಬಿ ಏರಿ ಮೇಲೆ ನೀರು ಹರಿಯುತ್ತಿದೆ. ಮಳೆ ಹೀಗೆಯೇ ಮುಂದುವರಿದರೆ ಕೆರೆ ಒಡೆಯುವ ಭೀತಿ ಎದುರಾಗಿದೆ.
ಒಂದು ವೇಳೆ ಕೆರೆ ಒಡೆದು ಹೋದರೆ ರೈತರು ಬೆಳೆದ ನೂರಾರು ಹೆಕ್ಟೇರ್ ಫಸಲು ನಾಶವಾಗುವ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದ್ದು, ಜನತೆ ಎಚ್ಚರಿಕೆ ವಹಿಸಬೇಕಾಗಿ ಸೂಚನೆ ನೀಡಲಾಗಿದೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…