ಚಾಮರಾಜನಗರ

ಮಳೆ ತಂದ ಅವಾಂತರ: ಬೆಳೆ ನಾಶದಿಂದ ಗುಂಡ್ಲುಪೇಟೆ ರೈತರು ಕಂಗಾಲು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೆಳೆ ನಾಶದಿಂದ ಅನ್ನದಾತರು ಕಂಗಾಲಾಗಿದ್ದಾರೆ.

ಭಾರೀ ಮಳೆಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಈರುಳ್ಳಿ ಬೆಳೆಗಾರರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದಲೂ ಮಳೆ ಎಡಬಿಡದೇ ಸುರಿಯುತ್ತಿದ್ದು, ಸಣ್ಣ ಈರುಳ್ಳಿ ಕೊಯ್ಲಿಗೆ ತೊಂದರೆಯಾಗಿದೆ.

ಸಣ್ಣ ಈರುಳ್ಳಿಯಿಂದ ಲಾಭ ಬರುತ್ತದೆ ಎಂದು ಅಂದಾಜಿಸಿ ರೈತರು ಹಲವು ಹೆಕ್ಟೇರ್‌ಗಳಲ್ಲಿ ಸಣ್ಣ ಈರುಳ್ಳಿ ಬೆಳೆದಿದ್ದರು. ಫಸಲೇನೋ ಉತ್ತಮವಾಗಿ ಬಂತು. ಆದರೆ ಕೈಗೆ ಬಂದ ತುತ್ತು ಈಗ ಬಾಯಿಗೆ ಬರದ ಹಾಗೇ ಆಗಿದೆ. ಈಗಾಗಲೇ ಕೊಯ್ಲು ಹಂತಕ್ಕೆ ಬಂದಿರುವ ಸಣ್ಣ ಈರುಳ್ಳಿಗೆ ಮಳೆಯೇ ಅಡ್ಡಿಯಾಗಿದೆ.

ಕಳೆದ ಎರಡು ತಿಂಗಳ ಹಿಂದೆ ಸಣ್ಣ ಈರುಳ್ಳಿಗೆ ಉತ್ತಮ ಬೆಲೆಯಿತ್ತು. ಆದರೆ ಈಗ ಮಳೆ ಕಾರಣದಿಂದ ಈರುಳ್ಳಿ ಕೊಳೆಯುತ್ತಿದ್ದು, ಬೆಲೆಯೂ ಕೂಡ ಕಡಿಮೆಯಾಗಿದೆ. ಇದರಿಂದ ಅನ್ನದಾತರು ತೀವ್ರ ಬೇಸರದಲ್ಲಿದ್ದು, ಮಳೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಇನ್ನೂ ಮಳೆ ಕೊಂಚ ಬಿಡುವು ಕೊಟ್ಟರೆ ಈರುಳ್ಳಿ ಕೊಯ್ಲು ಮಾಡಬಹುದು. ಆದ್ರೆ ಕಳೆದ ಒಂದು ವಾರದಿಂದ ಮಳೆ ಬಿಡುವು ಕೊಡದೇ ಸುರಿಯುತ್ತಿದೆ. ಹೀಗಾಗಿ ಈರುಳ್ಳಿ ಬೆಳೆದ ರೈತರು ಕೊಯ್ಲು ಮಾಡದೇ ಸಂಕಷ್ಟ ಅನುಭವಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ರೈತರು ಅಳಲು ತೋಡಿಕೊಂಡಿದ್ದು, ಈ ಬಾರಿ ನಮಗೆ ಮಳೆಯಿಂದ ಬೆಳೆ ನಾಶವಾಗಿದೆ. ನಾವು ಈರುಳ್ಳಿ ಬೆಳೆಗೆ ಖರ್ಚು ಮಾಡಿದಷ್ಟೂ ಬೆಲೆಯೂ ಸಿಗಲ್ಲ. ನಾವು ಸಾಲಸೋಲ ಮಾಡಿ ಈರುಳ್ಳಿ ಬೆಳೆದಿದ್ದೆವು. ಆದರೆ ಈ ಮಳೆಯಿಂದ ನಮಗೆ ಭಾರೀ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

3 hours ago