ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಸೂರ್ಯಕಾಂತಿ ಬೆಳೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.
ಈ ಬಾರಿ ಸೂರ್ಯಕಾಂತಿ ಬೆಳೆಯಿಂದ ಉತ್ತಮ ಆದಾಯ ಸಿಗುತ್ತದೆ ಎಂಬ ಆಸೆಯಲ್ಲಿದ್ದ ರೈತರಿಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಸಾಲ ಮಾಡಿ ಸೂರ್ಯಕಾಂತಿ ಬೆಳೆದಿದ್ದ ರೈತರು ಕಟಾವು ಮಾಡಲು ಸಾಧ್ಯವಾಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಭಾರೀ ಮಳೆಯಿಂದ ಜಮೀನಿನಲ್ಲಿ ನೀರು ನಿಂತಿದ್ದು, ನೀರು ಇಂಗದೇ ಸೂರ್ಯಕಾಂತಿ ಕಟಾವಿಗೆ ಅಡ್ಡಿಯಾಗಿದೆ. ಇನ್ನು ಹಲವು ರೈತರು ಸೂರ್ಯಕಾಂತಿ ಕಟಾವು ಮಾಡಿದ್ದು, ಬೀಜವನ್ನು ಒಣಗಿಸಲು ಬಿಸಿಲಿಲ್ಲದೇ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸೂರ್ಯಕಾಂತಿ ಬೆಳೆ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ರೈತರೆಲ್ಲಾ ಆಗ್ರಹಿಸಿದ್ದಾರೆ.
ಇನ್ನು ಸರ್ಕಾರ ಖರೀದಿ ಕೇಂದ್ರ ತೆರೆಯದ ಪರಿಣಾಮ ಬೆಲೆ ಭಾರೀ ಕುಸಿತವಾಗಿದೆ. ಪರಿಸ್ಥಿತಿಯ ಲಾಭ ಪಡೆಯುತ್ತಿರುವ ದಲ್ಲಾಳಿಗಳು ರೈತರಿಂದ ಕಡಿಮೆ ಬೆಲೆಗೆ ತೆಗೆದುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.
ಆದ್ದರಿಂದ ಸರ್ಕಾರವೇ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆದರೆ ಮಾರುಕಟ್ಟೆಯಲ್ಲಿ ದರ ಹೆಚ್ಚಾಗಿ ಅದರ ಲಾಭ ರೈತರಿಗೆ ದೊರೆಯಲಿದೆ ಎಂದು ರೈತರು ಒತ್ತಾಯಿಸಿದ್ದಾರೆ.
ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ…
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…
ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…
ಮಂಡ್ಯ : ಪ್ರಸ್ತುತ ಭಾರತ ದೇಶದಲ್ಲಿ ಮಹಿಳಾ ಸಾಕ್ಷರತೆ ಶೇ.69ರಷ್ಟಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದರು. ನಗರದ ಹರ್ಡೀಕರ್ಭವನದಲ್ಲಿ…
ಮೈಸೂರು : ನಗರ ಮತ್ತು ಹೊರ ವಲಯದ ಬಡಾವಣೆಗಳು, ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ 24 ಗಂಟೆಗಳ ಕಾಲ ಕುಡಿಯುವ…
ಗುವಾಹಟಿ : ಭಾರತ ಮತ್ತು ಬಾಂಗ್ಲಾದೇಶ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಘ್ನಗೊಂಡಿರುವ ನಡುವೆ, ಇಂಡಿಯನ್ ಪ್ರಿಮಿಯರ್ ಲೀಗ್ನ(ಐಪಿಎಲ್) 2026ರ…