ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಸೂರ್ಯಕಾಂತಿ ಬೆಳೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.
ಈ ಬಾರಿ ಸೂರ್ಯಕಾಂತಿ ಬೆಳೆಯಿಂದ ಉತ್ತಮ ಆದಾಯ ಸಿಗುತ್ತದೆ ಎಂಬ ಆಸೆಯಲ್ಲಿದ್ದ ರೈತರಿಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಸಾಲ ಮಾಡಿ ಸೂರ್ಯಕಾಂತಿ ಬೆಳೆದಿದ್ದ ರೈತರು ಕಟಾವು ಮಾಡಲು ಸಾಧ್ಯವಾಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಭಾರೀ ಮಳೆಯಿಂದ ಜಮೀನಿನಲ್ಲಿ ನೀರು ನಿಂತಿದ್ದು, ನೀರು ಇಂಗದೇ ಸೂರ್ಯಕಾಂತಿ ಕಟಾವಿಗೆ ಅಡ್ಡಿಯಾಗಿದೆ. ಇನ್ನು ಹಲವು ರೈತರು ಸೂರ್ಯಕಾಂತಿ ಕಟಾವು ಮಾಡಿದ್ದು, ಬೀಜವನ್ನು ಒಣಗಿಸಲು ಬಿಸಿಲಿಲ್ಲದೇ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸೂರ್ಯಕಾಂತಿ ಬೆಳೆ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ರೈತರೆಲ್ಲಾ ಆಗ್ರಹಿಸಿದ್ದಾರೆ.
ಇನ್ನು ಸರ್ಕಾರ ಖರೀದಿ ಕೇಂದ್ರ ತೆರೆಯದ ಪರಿಣಾಮ ಬೆಲೆ ಭಾರೀ ಕುಸಿತವಾಗಿದೆ. ಪರಿಸ್ಥಿತಿಯ ಲಾಭ ಪಡೆಯುತ್ತಿರುವ ದಲ್ಲಾಳಿಗಳು ರೈತರಿಂದ ಕಡಿಮೆ ಬೆಲೆಗೆ ತೆಗೆದುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.
ಆದ್ದರಿಂದ ಸರ್ಕಾರವೇ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆದರೆ ಮಾರುಕಟ್ಟೆಯಲ್ಲಿ ದರ ಹೆಚ್ಚಾಗಿ ಅದರ ಲಾಭ ರೈತರಿಗೆ ದೊರೆಯಲಿದೆ ಎಂದು ರೈತರು ಒತ್ತಾಯಿಸಿದ್ದಾರೆ.
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…