ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಸೂರ್ಯಕಾಂತಿ ಬೆಳೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.
ಈ ಬಾರಿ ಸೂರ್ಯಕಾಂತಿ ಬೆಳೆಯಿಂದ ಉತ್ತಮ ಆದಾಯ ಸಿಗುತ್ತದೆ ಎಂಬ ಆಸೆಯಲ್ಲಿದ್ದ ರೈತರಿಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಸಾಲ ಮಾಡಿ ಸೂರ್ಯಕಾಂತಿ ಬೆಳೆದಿದ್ದ ರೈತರು ಕಟಾವು ಮಾಡಲು ಸಾಧ್ಯವಾಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಭಾರೀ ಮಳೆಯಿಂದ ಜಮೀನಿನಲ್ಲಿ ನೀರು ನಿಂತಿದ್ದು, ನೀರು ಇಂಗದೇ ಸೂರ್ಯಕಾಂತಿ ಕಟಾವಿಗೆ ಅಡ್ಡಿಯಾಗಿದೆ. ಇನ್ನು ಹಲವು ರೈತರು ಸೂರ್ಯಕಾಂತಿ ಕಟಾವು ಮಾಡಿದ್ದು, ಬೀಜವನ್ನು ಒಣಗಿಸಲು ಬಿಸಿಲಿಲ್ಲದೇ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸೂರ್ಯಕಾಂತಿ ಬೆಳೆ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ರೈತರೆಲ್ಲಾ ಆಗ್ರಹಿಸಿದ್ದಾರೆ.
ಇನ್ನು ಸರ್ಕಾರ ಖರೀದಿ ಕೇಂದ್ರ ತೆರೆಯದ ಪರಿಣಾಮ ಬೆಲೆ ಭಾರೀ ಕುಸಿತವಾಗಿದೆ. ಪರಿಸ್ಥಿತಿಯ ಲಾಭ ಪಡೆಯುತ್ತಿರುವ ದಲ್ಲಾಳಿಗಳು ರೈತರಿಂದ ಕಡಿಮೆ ಬೆಲೆಗೆ ತೆಗೆದುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.
ಆದ್ದರಿಂದ ಸರ್ಕಾರವೇ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆದರೆ ಮಾರುಕಟ್ಟೆಯಲ್ಲಿ ದರ ಹೆಚ್ಚಾಗಿ ಅದರ ಲಾಭ ರೈತರಿಗೆ ದೊರೆಯಲಿದೆ ಎಂದು ರೈತರು ಒತ್ತಾಯಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…