ಚಾಮರಾಜನಗರ

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಅದೇ ರೀತಿ ಚಾಮರಾಜನಗರದಲ್ಲಿಯೂ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ತಾಲ್ಲೂಕಿನ ವೀರನಪುರ, ಯಡಪುರ, ತಮ್ಮಡಹಳ್ಳಿ, ಮರಿಯಾಲ, ಕಡುವಿನ ಕಟ್ಟೆ ಹುಂಡಿ ಗ್ರಾಮಗಳ ಸುತ್ತಮುತ್ತ ಆಲಿಕಲ್ಲು ಮಳೆ ಸುರಿದಿದೆ. ಏಕಾಏಕಿ ಸುರಿದ ಮಳೆಗೆ ಜನ ಕಂಗಾಲಾಗಿದ್ದಾರೆ.

ಮಂಗಳವಾರ ಮಧ್ಯಾಹ್ನ ಸುಮಾರು 3.30 ಗಂಟೆ ವೇಳೆ ಅರ್ಧ ಗಂಟೆ ಕಾಲ ಆಲಿಕಲ್ಲು ಸಹಿತ ಬಿರುಸಿನ ಮಳೆ ಸುರಿಯಿತು. ದೊಡ್ಡ ಗಾತ್ರದ ಆಲಿಕಲ್ಲು ಮಂಜುಗಡ್ಡೆ ರೀತಿ ಬಿದ್ದಿದ್ದು ಅಚ್ಚರಿ ಮೂಡಿಸಿದೆ. ಈ ಬಾರಿಯ ಮೊದಲ ವರ್ಷಧಾರೆ ಆಲಿಕಲ್ಲು ಸಹಿತ ಮಳೆ ಸುರಿದಿರುವುದು ಆಶ್ಚರ್ಯ ಮೂಡಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago