ಚಾಮರಾಜನಗರ

ಬೆಂಕಿಯ ಜ್ವಾಲೆಗೆ ಹೊತ್ತಿ ಉರಿದ ಮನೆಯ ಮೇಲ್ಚಾವಣಿ: ಕಂಗಾಲಾದ ಕುಟುಂಬ

ಹನೂರು: ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿರುವ ಘಟನೆ ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ಶಿವಲಿಂಗೇಗೌಡ ಎಂಬುವವರ ಮನೆಗೆ ಸಿಡಿಲು ಬಡಿದ ಪರಿಣಾಮ ಬೆಂಕಿಯ ಜ್ವಾಲೆಗೆ ಮನೆಯ ಮೇಲ್ಛಾವಣಿ ಹೊತ್ತಿ ಉರಿದಿದೆ. ಪರಿಣಾಮ ಮನೆಯಲ್ಲಿದ್ದ ವಿದ್ಯುತ್ ಪರಿಕರಗಳು, ಶೇಖರಣೆ ಮಾಡಿದ್ದ ಆಹಾರ ಪದಾರ್ಥಗಳು ಸಂಪೂರ್ಣ ಹಾನಿಯಾಗಿದೆ.

ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇಲ್ಲದ್ದರಿಂದ ಭಾರೀ ಅನಾಹುತ ಆಗುವುದು ತಪ್ಪಿದಂತಾಗಿದೆ. ಮನೆಯ ಗೋಡೆಯ ಒಂದು ಭಾಗ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಉಳಿದ ಗೋಡೆಗಳು ದೊಡ್ಡ ಗಾತ್ರದಲ್ಲಿ ಬಿರುಕು ಬಿಟ್ಟಿವೆ. ವಿದ್ಯುತ್ ಪರಿಕರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ವೈ.ಕೆ.ಗುರು ಪ್ರಸಾದ್, ಕಂದಾಯ ನಿರೀಕ್ಷಕ ಶೇಷಣ್ಣ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಕುರಿತು ಮಾತನಾಡಿರುವ ತಹಶೀಲ್ದಾರ್ ವೈ.ಕೆ.ಗುರು ಪ್ರಸಾದ್ ಅವರು, ಶುಕ್ರವಾರ ಬಡಿದ ಸಿಡಿಲಿಗೆ ಶಿವಲಿಂಗೇಗೌಡ ಎಂಬುವವರಿಗೆ ಸೇರಿದ ಮನೆಯ ಒಂದು ಗೋಡೆ ಸಂಪೂರ್ಣವಾಗಿ ಕುಸಿದಿದ್ದು, ಬೆಂಕಿಗೆ ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟುಹೋಗಿದೆ. ಈಗಾಗಲೇ ಕೆಎಆರ್‌ಐಡಿಎಲ್ ಅಧಿಕಾರಿಗಳಿಗೆ ನಷ್ಟವಾಗಿರುವ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ವರದಿ ನೀಡಿದ ನಂತರ ಪ್ರಕೃತಿ ವಿಕೋಪದಡಿ ಸರ್ಕಾರದಿಂದ ನೀಡುವ ಪರಿಹಾರವನ್ನು ಅತಿ ಶೀಘ್ರದಲ್ಲಿಯೇ ಮನೆಯ ಮಾಲೀಕರ ಖಾತೆಗೆ ಜಮಾ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ

 

 

ಆಂದೋಲನ ಡೆಸ್ಕ್

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

11 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

12 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

12 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

12 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

12 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

13 hours ago