ಚಾಮರಾಜನಗರ

ಬೆಂಕಿಯ ಜ್ವಾಲೆಗೆ ಹೊತ್ತಿ ಉರಿದ ಮನೆಯ ಮೇಲ್ಚಾವಣಿ: ಕಂಗಾಲಾದ ಕುಟುಂಬ

ಹನೂರು: ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿರುವ ಘಟನೆ ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ಶಿವಲಿಂಗೇಗೌಡ ಎಂಬುವವರ ಮನೆಗೆ ಸಿಡಿಲು ಬಡಿದ ಪರಿಣಾಮ ಬೆಂಕಿಯ ಜ್ವಾಲೆಗೆ ಮನೆಯ ಮೇಲ್ಛಾವಣಿ ಹೊತ್ತಿ ಉರಿದಿದೆ. ಪರಿಣಾಮ ಮನೆಯಲ್ಲಿದ್ದ ವಿದ್ಯುತ್ ಪರಿಕರಗಳು, ಶೇಖರಣೆ ಮಾಡಿದ್ದ ಆಹಾರ ಪದಾರ್ಥಗಳು ಸಂಪೂರ್ಣ ಹಾನಿಯಾಗಿದೆ.

ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇಲ್ಲದ್ದರಿಂದ ಭಾರೀ ಅನಾಹುತ ಆಗುವುದು ತಪ್ಪಿದಂತಾಗಿದೆ. ಮನೆಯ ಗೋಡೆಯ ಒಂದು ಭಾಗ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಉಳಿದ ಗೋಡೆಗಳು ದೊಡ್ಡ ಗಾತ್ರದಲ್ಲಿ ಬಿರುಕು ಬಿಟ್ಟಿವೆ. ವಿದ್ಯುತ್ ಪರಿಕರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ವೈ.ಕೆ.ಗುರು ಪ್ರಸಾದ್, ಕಂದಾಯ ನಿರೀಕ್ಷಕ ಶೇಷಣ್ಣ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಕುರಿತು ಮಾತನಾಡಿರುವ ತಹಶೀಲ್ದಾರ್ ವೈ.ಕೆ.ಗುರು ಪ್ರಸಾದ್ ಅವರು, ಶುಕ್ರವಾರ ಬಡಿದ ಸಿಡಿಲಿಗೆ ಶಿವಲಿಂಗೇಗೌಡ ಎಂಬುವವರಿಗೆ ಸೇರಿದ ಮನೆಯ ಒಂದು ಗೋಡೆ ಸಂಪೂರ್ಣವಾಗಿ ಕುಸಿದಿದ್ದು, ಬೆಂಕಿಗೆ ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟುಹೋಗಿದೆ. ಈಗಾಗಲೇ ಕೆಎಆರ್‌ಐಡಿಎಲ್ ಅಧಿಕಾರಿಗಳಿಗೆ ನಷ್ಟವಾಗಿರುವ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ವರದಿ ನೀಡಿದ ನಂತರ ಪ್ರಕೃತಿ ವಿಕೋಪದಡಿ ಸರ್ಕಾರದಿಂದ ನೀಡುವ ಪರಿಹಾರವನ್ನು ಅತಿ ಶೀಘ್ರದಲ್ಲಿಯೇ ಮನೆಯ ಮಾಲೀಕರ ಖಾತೆಗೆ ಜಮಾ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ

 

 

ಆಂದೋಲನ ಡೆಸ್ಕ್

Recent Posts

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

21 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

55 mins ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

4 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

5 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

20 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

23 hours ago