ಚಾಮರಾಜನಗರ: ಸುಮಾರು ೩೧ ಲಕ್ಷ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಸಾರ್ವಜನಿಕ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಾಣ ಮಾಡಲಾಗುತ್ತಿದ್ದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಇಂದು ಸ್ಥಳ ಪರಿಶೀಲನೆ ನಡೆಸಿದರು.
ನಗರದಲ್ಲಿ ಅತ್ಯಾಧುನಿಕ ಸೌಲಭ್ಯ ವ್ಯವಸ್ಥೆಗಳನ್ನು ಒಳಗೊಂಡ ಶೌಚಾಲಯ, ಸ್ನಾನ ಗೃಹಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ಈ ಸಂಬಂಧ ಸೂಕ್ತ ಸ್ಥಳವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು.
ನಗರದ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣ, ಪೇಟೆ ಪ್ರೈಮರಿ ಶಾಲೆ ಬಳಿ, ಲಾರಿ ನಿಲ್ದಾಣದ ಬಳಿ ಭೇಟಿ ನೀಡಿ ಜಿಲ್ಲಾಧಿಕಾರಿ ಸ್ಥಳ ಪರಿಶೀಲಿಸಿದರು.
ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಅಲ್ಲಿನ ಮೂಲ ಸೌಕರ್ಯವನ್ನು ವೀಕ್ಷಿಸಿದರು. ಶೌಚಾಲಯ ನಿರ್ವಹಣೆ, ಸ್ವಚ್ಚತೆ ಬಗ್ಗೆ ಪರಿಶೀಲನೆ ಮಾಡಿದರು. ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಯಾಣಿಕರೊಂದಿಗೆ ಮಾತನಾಡಿ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿದೆಯೇ, ಇನ್ನೂ ಯಾವ ಸೌಕರ್ಯಗಳು ಬೇಕಿದೆ ಎಂಬುದರ ಬಗ್ಗೆ ಚರ್ಚಿಸಿದರು.
ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಪ್ರಯಾಣಿಕರು, ಸಾರ್ವಜನಿಕರ ಬಳಕೆಗೆ ಅನುಕೂಲವಾಗುವಂತೆ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.
ನಗರಸಭೆ ಆಯುಕ್ತರಾದ ಎಸ್.ವಿ. ರಾಮದಾಸ್, ಆರೋಗ್ಯ ನಿರೀಕ್ಷಕರಾದ ಮಂಜು ಸೇರಿದಂತೆ ಇತರರು ಇದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…