ಚಾಮರಾಜನಗರ: ಸುಮಾರು ೩೧ ಲಕ್ಷ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಸಾರ್ವಜನಿಕ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಾಣ ಮಾಡಲಾಗುತ್ತಿದ್ದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಇಂದು ಸ್ಥಳ ಪರಿಶೀಲನೆ ನಡೆಸಿದರು.
ನಗರದಲ್ಲಿ ಅತ್ಯಾಧುನಿಕ ಸೌಲಭ್ಯ ವ್ಯವಸ್ಥೆಗಳನ್ನು ಒಳಗೊಂಡ ಶೌಚಾಲಯ, ಸ್ನಾನ ಗೃಹಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ಈ ಸಂಬಂಧ ಸೂಕ್ತ ಸ್ಥಳವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು.
ನಗರದ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣ, ಪೇಟೆ ಪ್ರೈಮರಿ ಶಾಲೆ ಬಳಿ, ಲಾರಿ ನಿಲ್ದಾಣದ ಬಳಿ ಭೇಟಿ ನೀಡಿ ಜಿಲ್ಲಾಧಿಕಾರಿ ಸ್ಥಳ ಪರಿಶೀಲಿಸಿದರು.
ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಅಲ್ಲಿನ ಮೂಲ ಸೌಕರ್ಯವನ್ನು ವೀಕ್ಷಿಸಿದರು. ಶೌಚಾಲಯ ನಿರ್ವಹಣೆ, ಸ್ವಚ್ಚತೆ ಬಗ್ಗೆ ಪರಿಶೀಲನೆ ಮಾಡಿದರು. ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಯಾಣಿಕರೊಂದಿಗೆ ಮಾತನಾಡಿ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿದೆಯೇ, ಇನ್ನೂ ಯಾವ ಸೌಕರ್ಯಗಳು ಬೇಕಿದೆ ಎಂಬುದರ ಬಗ್ಗೆ ಚರ್ಚಿಸಿದರು.
ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಪ್ರಯಾಣಿಕರು, ಸಾರ್ವಜನಿಕರ ಬಳಕೆಗೆ ಅನುಕೂಲವಾಗುವಂತೆ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.
ನಗರಸಭೆ ಆಯುಕ್ತರಾದ ಎಸ್.ವಿ. ರಾಮದಾಸ್, ಆರೋಗ್ಯ ನಿರೀಕ್ಷಕರಾದ ಮಂಜು ಸೇರಿದಂತೆ ಇತರರು ಇದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…