ಚಾಮರಾಜನಗರ

ಕೊಳ್ಳೇಗಾಲ | ಹೆದ್ದಾರಿ ಮೇಲ್ಸೇತುವೆ ತಡೆಗೋಡೆ ಕುಸಿತ

ಕೊಳ್ಳೇಗಾಲ : ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಮಂಜೂರಾಗಿದ್ದ ಬೆಂಗಳೂರು, ಕನಕಪುರ, ಮಳವಳ್ಳಿ, ಕೊಳ್ಳೇಗಾಲ, ಯಳಂದೂರು, ಚಾ.ನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ವರ್ಷವಷ್ಟೇ ಪೂರ್ಣಗೊಂಡಿದ್ದು, ಈಗ ಈ ರಸ್ತೆ ತೀವ್ರ ಕಳಪೆಯಿಂದ ಕೂಡಿದ್ದು, ಉತ್ತಂಬಳ್ಳಿಯಲ್ಲಿ ಮೇಲ್ಸೇತುವೆಯ ತಡೆಗೋಡೆ ಕುಸಿದು ಜನರು ಆತಂಕಗೊಂಡಿದ್ದಾರೆ.

ಈ ವಿಚಾರ ಅರಿತ ಶಾಸಕ ಎ.ಆರ್.ಕೃಷ್ಣಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೂಡಲೇ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಕ್ವಾಲಿಟಿ ಕಂಟ್ರೋಲ್‌ರವರನ್ನು ಸ್ಥಳಕ್ಕೆ ಕರೆಯಿಸಿ ತಪಾಸಣೆಗೆ ಒಳಪಡಿಸಿ ದುರಸ್ತಿಗೊಳಿಸಬೇಕೆಂದು ಸೂಚಿಸಿದ್ದಾರೆ.

ನಂತರ ಮಾಧ್ಯಮವರ ಜೊತೆ ಮಾತನಾಡಿದ ಅವರು, ಸತ್ತೇಗಾಲ ಸೇತುವೆ ಕಳಪೆಯಿಂದ ಕೂಡಿದ್ದು, ಸೇತುವೆ ಗುಂಡಿ ಬಿದ್ದಿದೆ. ಕೊಳ್ಳೇಗಾಲದ ಇಬ್ಬರು ಈ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಮೈಸೂರಿನ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಸಂಸದ ಸುನಿಲ್ ಬೋಸ್‌ರವರು ಕೂಡಲೇ ರಾಷ್ಟ್ರೀಯ ಹೆದ್ದಾರಿ ಸಚವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಸ್ಥಳಕ್ಕೆ ಕ್ವಾಲಿಟಿ ಕಂಟ್ರೋಲ್‌ರವರನ್ನು ಕರೆಸಿ, ರಸ್ತೆ ಸುರಕ್ಷತೆಯ ಕುರಿತು ಪರೀಕ್ಷಿಸಿ, ೧ ವರ್ಷದಲ್ಲಿ ಗುಂಡಿ ಬಿದ್ದಿರುವ ಸೇತುವೆಯನ್ನು ಹೊಸದಾಗಿ ನಿರ್ಮಿಸಲು ಒತ್ತಾಯಿಸಬೇಕೆಂದು ತಿಳಿಸಿದರು.

ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ದೊಡ್ಡ ಅನಾಹುತ ವಾಗುವ ಸಂಭವ ಇರುವುದರಿಂದ ಸಂಸದರು ಮಂತ್ರಿಗಳ ಗಮನ ಸೆಳೆದು ಸಂಭಾವ್ಯ ಅನಾಹುತವನ್ನು ತಪ್ಪಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.

ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಆಡಳಿತಕ್ಕೆ ಒಳಪಡುವುದರಿಂದ ಕೇಂದ್ರ ಸರ್ಕಾರದವರೇ ತುರ್ತು ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಮಾತನಾಡಿ, ಜಿಲ್ಲಾಧಿಕಾರಿಗಳು ಈ ಸಂಬಂಧ ರಸ್ತೆ ಪರಿಶೀಲನೆ ಸಮಿತಿಗೆ ಪತ್ರ ಬರೆದಿದ್ದಾರೆ. ತಾಂತ್ರಿಕ ಸಿಬ್ಬಂದಿ ಆಗಮಿಸಿ ಪರಿಶೀಲಿಸಿ ವರದಿ ಕೊಟ್ಟ ಮೇಲೆ ಸಂಬಂಧಪಟ್ಟ ಗುತ್ತಿಗೆದಾರನ ಮೇಲೆ ದೂರು ಸಲ್ಲಿಸಿ ಎಫ್‌ಐಅರ್ ಹಾಕಿಸುವುದಾಗಿ ತಿಳಿಸಿದ್ದಾರೆ. ತನಿಖಾ ತಂಡ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಮಿಲಿನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಎಚ್.ವಿ.ಚಂದ್ರು, ಡಿವೈಎಸ್ಪಿ ಧರ್ಮೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

2 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

4 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

5 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

6 hours ago