ಚಾಮರಾಜನಗರ

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ.

ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ.

ಭಾರೀ ಮಳೆಯ ನಡುವೆಯೂ ದೇಗುಲಕ್ಕೆ ಆಗಮಿಸುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಆದರೂ ಇಲ್ಲಿ ಮೂಲಭೂತ ಸೌಕರ್ಯ ಸರಿಯಾಗಿ ಮಾಡದೇ ಇರುವುದು ಭಾರೀ ಬೇಸರ ತಂದಿದೆ.

ಮಳೆಯ ನಡುವೆ ನೂರಾರು ಮಂದಿ ಕ್ಯೂನಲ್ಲಿ ನಿಂತರೂ ಟಿಕೆಟ್‌ ಕೊಡುವಲ್ಲಿ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಲಿನಲ್ಲಿ ನಿಂತವರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಇಲ್ಲಿ ಮಹಿಳೆಯರಿಗೆ ಮಾತ್ರ ಶೌಚಾಲಯದ ವ್ಯವಸ್ಥೆಯಿದ್ದು, ಪುರುಷರಿಗೆ ಯಾವುದೇ ಶೌಚಾಲಯ ವ್ಯವಸ್ಥೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಂಜೆ 4 ಗಂಟೆವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಸಮಸ್ಯೆಗಳು ಕಂಡು ಬಂದರೆ ಅಲ್ಲಿಗೆ ತೆರಳಿರುವವರ ಕಥೆಯೇನು ಎಂಬುದೇ ಎಲ್ಲರ ಯಕ್ಷ ಪ್ರಶ್ನೆಯಾಗಿದೆ.

ಈ ಹಿನ್ನೆಲೆಯಲ್ಲಿ ಜನರು ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

3 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

3 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

3 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

3 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago