ಚಾಮರಾಜನಗರ: ನೆರೆಯ ರಾಜ್ಯ ತಮಿಳುನಾಡಿನ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೊಗೇನಕಲ್ ಫಾಲ್ಸ್ನಲ್ಲಿ ಕನ್ನಡಿಗರು ತೆಪ್ಪ ಸಂಚಾರವನ್ನೇ ಸ್ಥಗಿತ ಮಾಡಿದ್ದಾರೆ.
ಹಲವು ವರ್ಷಗಳಿಂದ ತೆಪ್ಪ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ಕನ್ನಡಿಗರಿಗೆ ತಮಿಳುನಾಡು ಪೊಲೀಸರು ಭಾರೀ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಮಾರುಕೊಟ್ಟಾಯ್ ನಿವಾಸಿಗಳು ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಕೈಬಿಡಲ್ಲ. ನಮಗೆ ನ್ಯಾಯ ಕೊಡಿಸಲೇಬೇಕು ಎಂದು ಕನ್ನಡಿಗರು ಅಂಗಲಾಚಿದ್ದಾರೆ.
ಇನ್ನು ಹೊಗೇನಕಲ್ ಫಾಲ್ಸ್ನಲ್ಲಿ ತೆಪ್ಪ ಸಂಚಾರ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ತೀವ್ರ ಇಳಿಮುಖವಾಗಿದೆ ಎನ್ನಲಾಗಿದ್ದು, ಫಾಲ್ಸ್ಗೆ ತೆರಳುವ ಪ್ರವಾಸಿಗರಿಗೆ ಭಾರೀ ನಿರಾಸೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…