Hogenakkal Falls | Protest demanding permission to operate coracle rides.
ಹನೂರು : ಹೊಗೇನಕಲ್ ಫಾಲ್ಸ್ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ತೆಪ್ಪ ಓಡಿಸಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೊಗೇನಕಲ್ ಫಾಲ್ಸ್ ಅಂಬಿಗರು ಆರೋಪಿಸಿದ್ದಾರೆ.
ಹೊಗೇನಕಲ್ ಫಾಲ್ಸ್ನ ಪಳನಿಸ್ವಾಮಿ ಎಂಬವರು ಮಾತನಾಡಿ, ಕಾವೇರಿ, ಕಬಿನಿ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ಗೂ ಹೆಚ್ಚು ನೀರು ಬಿಟ್ಟಿದ್ದ ಪರಿಣಾಮ ಕಳೆದ ಒಂದು ವಾರದಿಂದ ಹೊಗೇನಕಲ್ ಫಾಲ್ಸ್ನಲ್ಲಿ ತೆಪ್ಪ ಓಡಿಸಲು ನಿರ್ಬಂಧ ವಿಧಿಸಲಾಗಿತ್ತು. 3 ದಿನಗಳಿಂದ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ತಮಿಳುನಾಡಿನ ಅಂಬಿಗರಿಗೆ ಅಲ್ಲಿನ ಅರಣ್ಯ ಇಲಾಖೆ ತೆಪ್ಪ ಓಡಿಸಲು ಅವಕಾಶ ನೀಡಿದೆ. ಆದರೆ ಕರ್ನಾಟಕದಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು ನಮಗೆ ತೆಪ್ಪ ಓಡಿಸಲು ಬಿಡುತ್ತಿಲ್ಲ. ಕೇಳಿದರೆ ನಮಗೆ ಹಿರಿಯ ಅಧಿಕಾರಿಗಳಿಂದ ಯಾವುದೇ ಅನುಮತಿ ನೀಡಿಲ್ಲ ಎನ್ನುತ್ತಿದ್ದಾರೆ.
ಹೊಗೇನಕಲ್ ಫಾಲ್ಸ್ನಲ್ಲಿ 400 ಕ್ಕೂ ಹೆಚ್ಚು ಅಂಬಿಗರಿದ್ದು ತೆಪ್ಪ ಓಡಿಸುವುದನ್ನು ನಂಬಿಕೊಂಡಿದ್ದೇವೆ. ಆದರೆ ಅಧಿಕಾರಿಗಳ ನಿರ್ಲಕ್ಷದಿಂದ ನಮಗೆ ಜೀವನಕ್ಕೂ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ತೆಪ್ಪ ಒಡಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…