Hogenakkal Falls | Protest demanding permission to operate coracle rides.
ಹನೂರು : ಹೊಗೇನಕಲ್ ಫಾಲ್ಸ್ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ತೆಪ್ಪ ಓಡಿಸಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೊಗೇನಕಲ್ ಫಾಲ್ಸ್ ಅಂಬಿಗರು ಆರೋಪಿಸಿದ್ದಾರೆ.
ಹೊಗೇನಕಲ್ ಫಾಲ್ಸ್ನ ಪಳನಿಸ್ವಾಮಿ ಎಂಬವರು ಮಾತನಾಡಿ, ಕಾವೇರಿ, ಕಬಿನಿ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ಗೂ ಹೆಚ್ಚು ನೀರು ಬಿಟ್ಟಿದ್ದ ಪರಿಣಾಮ ಕಳೆದ ಒಂದು ವಾರದಿಂದ ಹೊಗೇನಕಲ್ ಫಾಲ್ಸ್ನಲ್ಲಿ ತೆಪ್ಪ ಓಡಿಸಲು ನಿರ್ಬಂಧ ವಿಧಿಸಲಾಗಿತ್ತು. 3 ದಿನಗಳಿಂದ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ತಮಿಳುನಾಡಿನ ಅಂಬಿಗರಿಗೆ ಅಲ್ಲಿನ ಅರಣ್ಯ ಇಲಾಖೆ ತೆಪ್ಪ ಓಡಿಸಲು ಅವಕಾಶ ನೀಡಿದೆ. ಆದರೆ ಕರ್ನಾಟಕದಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು ನಮಗೆ ತೆಪ್ಪ ಓಡಿಸಲು ಬಿಡುತ್ತಿಲ್ಲ. ಕೇಳಿದರೆ ನಮಗೆ ಹಿರಿಯ ಅಧಿಕಾರಿಗಳಿಂದ ಯಾವುದೇ ಅನುಮತಿ ನೀಡಿಲ್ಲ ಎನ್ನುತ್ತಿದ್ದಾರೆ.
ಹೊಗೇನಕಲ್ ಫಾಲ್ಸ್ನಲ್ಲಿ 400 ಕ್ಕೂ ಹೆಚ್ಚು ಅಂಬಿಗರಿದ್ದು ತೆಪ್ಪ ಓಡಿಸುವುದನ್ನು ನಂಬಿಕೊಂಡಿದ್ದೇವೆ. ಆದರೆ ಅಧಿಕಾರಿಗಳ ನಿರ್ಲಕ್ಷದಿಂದ ನಮಗೆ ಜೀವನಕ್ಕೂ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ತೆಪ್ಪ ಒಡಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…