ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ ಹೊಗೇನಕಲ್ ಸಮೀಪದ ಮಾರಿಕೊಟ್ಟಯಂನಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಜರುಗಿದೆ.
ಹನೂರು ತಾಲೂಕಿನ ಒಡೆಯರ ಪಾಳ್ಯ ಗ್ರಾಮ ಸಮೀಪದ ಗುಳ್ಳದ ಬಯಲು ಗ್ರಾಮದ ಶಿವು(22) ಮೃತಪಟ್ಟ ಯುವಕನಾಗಿದ್ದಾನೆ.
ಘಟನೆಯ ವಿವರ
ಒಡೆಯರಪಾಳ್ಯ, ಆಣೆ ಹೊಲ, ಕೋಣನಕೆರೆ ಗ್ರಾಮಗಳಿಂದ ತಮಿಳುನಾಡಿನ ಪೆನ್ನಾಗರಂಗೆ ಹುಣಸೆಹಣ್ಣು ಕೀಳಲು ತೆರಳಿದ್ದರು. ಕೂಲಿ ಕೆಲಸ ಮುಗಿದ ನಂತರ ನೀರಿನಲ್ಲಿ ಈಜಿಕೊಂಡು ಹೋಗಲು ನಿರ್ಧರಿಸಿದ್ದಾರೆ ಆದರೆ ಸ್ಥಳೀಯರು ನೀರಿನ ಪ್ರಮಾಣ ಹೆಚ್ಚಿರುವುದರಿಂದ ತೆಪ್ಪದ ಮೂಲಕ ಹೋಗಿ ಎಂದು ತಿಳಿಸಿದ್ದಾರೆ. ಆದರೆ ಸ್ಥಳೀಯರ ಮಾತು ಕೇಳದೆ ಈಜುಕೊಂಡೆ ದಡ ಸೇರಲು ಪ್ರಯತ್ನಿಸಿದ್ದಾರೆ. ಈ ವೇಳೆ ಐವರು ಸಹ ನೀರಿನ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ನಾಲ್ವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಶಿವು ಮಾತ್ರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಕಾರದಿಂದ ಶವವನ್ನು ನದಿ ದಡಕ್ಕೆ ಎಳೆದು ತರಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…
ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…