ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ ಹೊಗೇನಕಲ್ ಸಮೀಪದ ಮಾರಿಕೊಟ್ಟಯಂನಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಜರುಗಿದೆ.
ಹನೂರು ತಾಲೂಕಿನ ಒಡೆಯರ ಪಾಳ್ಯ ಗ್ರಾಮ ಸಮೀಪದ ಗುಳ್ಳದ ಬಯಲು ಗ್ರಾಮದ ಶಿವು(22) ಮೃತಪಟ್ಟ ಯುವಕನಾಗಿದ್ದಾನೆ.
ಘಟನೆಯ ವಿವರ
ಒಡೆಯರಪಾಳ್ಯ, ಆಣೆ ಹೊಲ, ಕೋಣನಕೆರೆ ಗ್ರಾಮಗಳಿಂದ ತಮಿಳುನಾಡಿನ ಪೆನ್ನಾಗರಂಗೆ ಹುಣಸೆಹಣ್ಣು ಕೀಳಲು ತೆರಳಿದ್ದರು. ಕೂಲಿ ಕೆಲಸ ಮುಗಿದ ನಂತರ ನೀರಿನಲ್ಲಿ ಈಜಿಕೊಂಡು ಹೋಗಲು ನಿರ್ಧರಿಸಿದ್ದಾರೆ ಆದರೆ ಸ್ಥಳೀಯರು ನೀರಿನ ಪ್ರಮಾಣ ಹೆಚ್ಚಿರುವುದರಿಂದ ತೆಪ್ಪದ ಮೂಲಕ ಹೋಗಿ ಎಂದು ತಿಳಿಸಿದ್ದಾರೆ. ಆದರೆ ಸ್ಥಳೀಯರ ಮಾತು ಕೇಳದೆ ಈಜುಕೊಂಡೆ ದಡ ಸೇರಲು ಪ್ರಯತ್ನಿಸಿದ್ದಾರೆ. ಈ ವೇಳೆ ಐವರು ಸಹ ನೀರಿನ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ನಾಲ್ವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಶಿವು ಮಾತ್ರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಕಾರದಿಂದ ಶವವನ್ನು ನದಿ ದಡಕ್ಕೆ ಎಳೆದು ತರಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…