ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದ ಜನರು ಸರ್ಕಾರ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
ಗ್ರಾಮದ ಎಲ್ಲಾ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಮಳೆಗಾಲದಲ್ಲಂತೂ ರಸ್ತೆ ಕೆಸರು ಗದ್ದೆಯಾಗಿ ಪರಿವರ್ತೆಯಾಗುತ್ತದೆ. ಗ್ರಾಮ ಪಂಚಾಯಿತಿಯ ಈ ನಡೆ ಬಗ್ಗೆ ಗ್ರಾಮದ ಜನರೆಲ್ಲರೂ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಗ್ರಾಮದ ಬಸ್ ನಿಲ್ದಾಣವೇ ಮಳೆ ಬಂದರೆ ಕೆರೆಯಂತಾಗಿ ಜನರು ಬಸ್ಗಾಗಿ ಕಾಯಲು ಸೂಕ್ತ ಸ್ಥಳವೇ ಇಲ್ಲದಂತಾಗಿದೆ. ಈ ಹಿಂದೆ ಎರಡೂ ಬಸ್ ನಿಲ್ದಾಣಗಳು ನಿರ್ಮಾಣಗೊಂಡಿದ್ದು ಎರಡೂ ಸಂಪೂರ್ಣವಾಗಿ ಹಾಳಾಗಿದ್ದು, ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.
ಇನ್ನು ಗ್ರಾಮದ ಪ್ರಮುಖ ರಸ್ತೆ ಅಭಿವೃದ್ಧಿಗೊಳಿಸಿ ದಶಕಗಳೇ ಕಳೆದಿದ್ದು, ಮಳೆಗಾಲದಲ್ಲಿ ರಸ್ತೆಯಲ್ಲವೂ ಕೆಸರು ಗದ್ದೆಯಾಗಿ ಬದಲಾಗುತ್ತಿದೆ. ಈ ಬಗ್ಗೆ ಗ್ರಾಮಸ್ಥರು ಗ್ರಾಪಂ ದೂರು ನೀಡಿದರೂ ಯಾವುದೇ ಪ್ರಯೋಜವಾಗಿಲ್ಲ.
ಪಿಡಿಒ ರಾಮೇಗೌಡ ವಾರದಲ್ಲಿ ಮೂರು ದಿನಗಳು ಸಹಾ ಗ್ರಾಪಂ ನಲ್ಲಿ ಕಾಣಸಿಗುವುದಿಲ್ಲ. ಜನರ ಸಮಸ್ಯೆಗಳಿಗೆ ಆಲಿಸುವ ಮನಸ್ಸು ಅವರಿಗಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ರಸ್ತೆಗಳು ಹಾಳಾಗಿ ಅಲ್ಲಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಮಳೆ ನೀರು ನಿಂತು ಡೇಂಘಿ, ಮಲೇರಿಯಾ ರೋಗಗಳು ಹರಡುವ ಸೂಚನೆಯನ್ನು ನೀಡುತ್ತಿದೆ. ಮಳೆ ನೀರನ್ನು ಸಮರ್ಪಕವಾಗಿ ಹೊರಹಾಕಲು ಸೂಕ್ತ ಚರಂಡಿ ವ್ಯವಸ್ಥೆಯೂ ಇಲ್ಲ. ಗ್ರಾಮದ ತುಂಬೆಲ್ಲಾ ಡೇಂಘಿ ಭಯ ಜನರನ್ನು ಕಾಡುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ರಸ್ತೆಗೆ ಶಾಸ್ವತ ಪರಿಹಾರ ಒದಗಿಸುವಂತೆ ಗ್ರಾಮಸ್ಥರು “ಆಂದೋಲನ” ಪತ್ರಿಕೆ ಜೊತೆ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…