ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಬ್ಲೇಝರ್, ಟೈ ಮತ್ತು ಇತರ ಭಾರವಾದ ಸಮವಸ್ತ್ರ ಧರಿಸುವುದನ್ನು ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಶ್ರೀರೂಪ ಆದೇಶಿಸಿದ್ದಾರೆ.
ಪ್ರಸ್ತುತ ಸಂದರ್ಭದಲ್ಲಿ ಅಸೌಕರ್ಯಕರವಾದ ಸಮವಸ್ತ್ರಗಳನ್ನು ಧರಿಸುವುದರಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಹಗುರ, ಸಡಿಲ, ಆರಾಮದಾಯಕ ಉಡುಪುಗಳನ್ನು ಧರಿಸಲು ಶಿಕ್ಷಣ ಸಂಸ್ಥೆಗಳು ಅನುಮತಿ ನೀಡಬೇಕಿದೆ.
ಎಲ್ಲಾ ಶಿಕ್ಷಣ ಸಂಸ್ಥೆಗಳು ಮುನ್ನೆಚ್ಚರಿಕಾ ಕ್ರಮವಾಗಿ ಕೊಠಡಿಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮಧ್ಯಾಹ್ನದ ತೀವ್ರ ಬಿಸಿ ವಾತಾವರಣದ ಸಮಯದಲ್ಲಿ ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸಬೇಕು. ಬಿಸಿ ಗಾಳಿಯಿಂದ ಉಂಟಾಗುವ ಅನಾರೋಗ್ಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಈ ಆದೇಶವು ಮುಂದಿನ ಸೂಚನೆ ಬರುವವರೆಗೆ ಅಥವಾ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿ ಕಡಿಮೆಯಾಗುವವವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…