ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಸೋಮವಾರ ಬೆಳಿಗ್ಗೆ ಮಂಗಲ ಗ್ರಾಮದ ಯುವಕರ ತಂಡ ಜಲಾಶಯಕ್ಕೆ ಭೇಟಿ ನೀಡಿದ್ದ ವೇಳೆ ನೀರಿನಲ್ಲಿ ಬಾರಿ ಗಾತ್ರದ ಹೆಬ್ಬಾವು ಕಂಡು ಯುವಕರು ಬೆಚ್ಚಿಬಿದ್ದಿದ್ದಾರೆ.
ಗುಂಡಾಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿರುವುದರಿಂದ ರುದ್ರ ರಮಣೀಯ ದೃಶ್ಯ ಸವಿಯಲು ಹೋದ ಯುವಕರ ತಂಡಕ್ಕೆ ಜಲಾಶಯದಲ್ಲಿ ಸುಮಾರು 15 ಅಡಿ ಕ್ಷೇತ್ರದ ಹೆಬ್ಬಾವು ಕಂಡಿದೆ ತಕ್ಷಣ ಯುವಕ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟು ಗುಂಡಾಲ್ ಜಲಾಶಯಕ್ಕೆ ಭೇಟಿ ನೀಡುವ ಪ್ರವಾಸಿಗರು ನೀರಿಗೆ ತಿಳಿಯುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನು ಓದಿ: ಎಚ್.ಡಿ.ಕೋಟೆ| ಆಶ್ರಮ ಶಾಲೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ರಕ್ಷಣೆ
ಗುಂಡಾಲ್ ಜಲಾಶಯಕ್ಕೆ ಕಾವೇರಿ ನದಿಯಿಂದ ಭಾರಿ ಪ್ರಮಾಣದಲ್ಲಿ ನೀರು ಹರಿಸುವ ಮೂಲಕ ತುಂಬಿರುವ ಜಲಾಶಯವನ್ನು ವೀಕ್ಷಿಸಲು ಸರ್ಕಾರಿ ರಜಾ ದಿನಗಳಲ್ಲಿ ಗುಂಡಾಲ್ ಜಲಾಶಯದ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಗುಂಡಾಲ್ ಜಲಾಶಯದ ರುದ್ರರಮಣಿಯ ಅಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟಗುಡ್ಡ, ತುಂಬಿರುವ ಜಲಾಶಯದ ನೀರು ನೋಡುಗರ ಕಣ್ಮನ ಸೆಳೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಗುಂಡಲ್ ಜಲಾಶಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರವಾಸಿಗರು ವಿಡಿಯೋ ಹರಿಬಿಡುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…