ಚಾಮರಾಜನಗರ

ಗುಂಡಾಲ್‌ ಡ್ಯಾಂನಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪತ್ತೆ

ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಸೋಮವಾರ ಬೆಳಿಗ್ಗೆ ಮಂಗಲ ಗ್ರಾಮದ ಯುವಕರ ತಂಡ ಜಲಾಶಯಕ್ಕೆ ಭೇಟಿ ನೀಡಿದ್ದ ವೇಳೆ ನೀರಿನಲ್ಲಿ ಬಾರಿ ಗಾತ್ರದ ಹೆಬ್ಬಾವು ಕಂಡು ಯುವಕರು ಬೆಚ್ಚಿಬಿದ್ದಿದ್ದಾರೆ.

ಗುಂಡಾಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿರುವುದರಿಂದ ರುದ್ರ ರಮಣೀಯ ದೃಶ್ಯ ಸವಿಯಲು ಹೋದ ಯುವಕರ ತಂಡಕ್ಕೆ ಜಲಾಶಯದಲ್ಲಿ ಸುಮಾರು 15 ಅಡಿ ಕ್ಷೇತ್ರದ ಹೆಬ್ಬಾವು ಕಂಡಿದೆ ತಕ್ಷಣ ಯುವಕ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟು ಗುಂಡಾಲ್ ಜಲಾಶಯಕ್ಕೆ ಭೇಟಿ ನೀಡುವ ಪ್ರವಾಸಿಗರು ನೀರಿಗೆ ತಿಳಿಯುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನು ಓದಿ: ಎಚ್.ಡಿ.ಕೋಟೆ| ಆಶ್ರಮ ಶಾಲೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ರಕ್ಷಣೆ 

ಗುಂಡಾಲ್ ಜಲಾಶಯಕ್ಕೆ ಕಾವೇರಿ ನದಿಯಿಂದ ಭಾರಿ ಪ್ರಮಾಣದಲ್ಲಿ ನೀರು ಹರಿಸುವ ಮೂಲಕ ತುಂಬಿರುವ ಜಲಾಶಯವನ್ನು ವೀಕ್ಷಿಸಲು ಸರ್ಕಾರಿ ರಜಾ ದಿನಗಳಲ್ಲಿ ಗುಂಡಾಲ್ ಜಲಾಶಯದ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಗುಂಡಾಲ್ ಜಲಾಶಯದ ರುದ್ರರಮಣಿಯ ಅಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟಗುಡ್ಡ, ತುಂಬಿರುವ ಜಲಾಶಯದ ನೀರು ನೋಡುಗರ ಕಣ್ಮನ ಸೆಳೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಗುಂಡಲ್ ಜಲಾಶಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರವಾಸಿಗರು ವಿಡಿಯೋ ಹರಿಬಿಡುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

13 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

13 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

13 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago