200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್, ರಂಗನಾಥನಿಗೆ ಭಕ್ತರು ನೀಡಿದ್ದಾರೆ.
ಚಾಮರಾಜನಗರ : ಜಿಲ್ಲೆಯ ಯಳಂದೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ ಹುಂಡಿ ಎಣಿಕೆಯು 3 ತಿಂಗಳ ಬಳಿಕ ನಡೆದಿದ್ದು 37 ಲಕ್ಷರೂ. ಸಂಗ್ರಹವಾಗಿದ್ದು ಡಾಲರ್ ಗಳನ್ನು ವಿದೇಶಿ ಭಕ್ತರು ಅರ್ಪಿಸಿದ್ದಾರೆ.
ಕಳೆದ 3 ತಿಂಗಳ ಬಳಿಕ ನಡೆದ ಹುಂಡಿ ಎಣಿಕೆಯಲ್ಲಿ 37,74,562 ರೂ. ಹಣ ಸಂಗ್ರಹವಾಗಿದ್ದು, 200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್ ಕೂಡ ರಂಗನಾಥನಿಗೆ ಭಕ್ತರು ಅರ್ಪಿಸಿದ್ದಾರೆ. ವಿದೇಶಿಗರು ಇಲ್ಲಿನ ಬೆಟ್ಟಕ್ಕೆ ಭೇಟಿ ಕೊಡುವುದರಿಂದ ಹುಂಡಿಯಲ್ಲಿ ಡಾಲರ್ ಪತ್ತೆಯಾಗಿದೆ.
11 ಸಣ್ಣ ಮಾಂಗಲ್ಯ, 1 ಬೆಳ್ಳಿ ಮುಖವಾಡ, 1 ಪುಟಾಣಿ ಘಂಟೆ- ಆರತಿ, 2 ಬೆಳ್ಳಿ ಕೊಳಲು, 2 ದೇವರ ಮೂರ್ತಿಯನ್ನು ಹರಕೆ ಕೊತ್ತ ಭಕ್ತರು ಕಾಣಿಕೆ ರೂಪದಲ್ಲಿ ಸ್ವಾಮಿಗೆ ಅರ್ಪಿಸಿದ್ದಾರೆ ಎಂದು ಇಒ ಮೋಹನ್ ತಿಳಿಸಿದ್ದಾರೆ.
ಸತತ ಮಳೆ ಪರಿಣಾಮ ಹಸಿರಿನ ಚೆಲುವಿನಿಂದ ಬಿಳಿಗಿರಿರಂಗನ ಬೆಟ್ಟ ಕಂಗೊಳಿಸುತ್ತಿದ್ದು ಭಕ್ತರು, ಪ್ರವಾಸಿಗರ ಸಂಖ್ಯೆ ದ್ವಿಗುಣಗೊಂಡಿದೆ. ವಾರಾಂತ್ಯದಲ್ಲಿ ಪ್ರಕೃತಿ ಚೆಲುವು ಕಣ್ತುಂಬಿಕೊಳ್ಳಲು ಜನಕಿಕ್ಕಿರಿದು ಸೇರುತ್ತಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…