200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್, ರಂಗನಾಥನಿಗೆ ಭಕ್ತರು ನೀಡಿದ್ದಾರೆ.
ಚಾಮರಾಜನಗರ : ಜಿಲ್ಲೆಯ ಯಳಂದೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ ಹುಂಡಿ ಎಣಿಕೆಯು 3 ತಿಂಗಳ ಬಳಿಕ ನಡೆದಿದ್ದು 37 ಲಕ್ಷರೂ. ಸಂಗ್ರಹವಾಗಿದ್ದು ಡಾಲರ್ ಗಳನ್ನು ವಿದೇಶಿ ಭಕ್ತರು ಅರ್ಪಿಸಿದ್ದಾರೆ.
ಕಳೆದ 3 ತಿಂಗಳ ಬಳಿಕ ನಡೆದ ಹುಂಡಿ ಎಣಿಕೆಯಲ್ಲಿ 37,74,562 ರೂ. ಹಣ ಸಂಗ್ರಹವಾಗಿದ್ದು, 200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್ ಕೂಡ ರಂಗನಾಥನಿಗೆ ಭಕ್ತರು ಅರ್ಪಿಸಿದ್ದಾರೆ. ವಿದೇಶಿಗರು ಇಲ್ಲಿನ ಬೆಟ್ಟಕ್ಕೆ ಭೇಟಿ ಕೊಡುವುದರಿಂದ ಹುಂಡಿಯಲ್ಲಿ ಡಾಲರ್ ಪತ್ತೆಯಾಗಿದೆ.
11 ಸಣ್ಣ ಮಾಂಗಲ್ಯ, 1 ಬೆಳ್ಳಿ ಮುಖವಾಡ, 1 ಪುಟಾಣಿ ಘಂಟೆ- ಆರತಿ, 2 ಬೆಳ್ಳಿ ಕೊಳಲು, 2 ದೇವರ ಮೂರ್ತಿಯನ್ನು ಹರಕೆ ಕೊತ್ತ ಭಕ್ತರು ಕಾಣಿಕೆ ರೂಪದಲ್ಲಿ ಸ್ವಾಮಿಗೆ ಅರ್ಪಿಸಿದ್ದಾರೆ ಎಂದು ಇಒ ಮೋಹನ್ ತಿಳಿಸಿದ್ದಾರೆ.
ಸತತ ಮಳೆ ಪರಿಣಾಮ ಹಸಿರಿನ ಚೆಲುವಿನಿಂದ ಬಿಳಿಗಿರಿರಂಗನ ಬೆಟ್ಟ ಕಂಗೊಳಿಸುತ್ತಿದ್ದು ಭಕ್ತರು, ಪ್ರವಾಸಿಗರ ಸಂಖ್ಯೆ ದ್ವಿಗುಣಗೊಂಡಿದೆ. ವಾರಾಂತ್ಯದಲ್ಲಿ ಪ್ರಕೃತಿ ಚೆಲುವು ಕಣ್ತುಂಬಿಕೊಳ್ಳಲು ಜನಕಿಕ್ಕಿರಿದು ಸೇರುತ್ತಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…