200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್, ರಂಗನಾಥನಿಗೆ ಭಕ್ತರು ನೀಡಿದ್ದಾರೆ.
ಚಾಮರಾಜನಗರ : ಜಿಲ್ಲೆಯ ಯಳಂದೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ ಹುಂಡಿ ಎಣಿಕೆಯು 3 ತಿಂಗಳ ಬಳಿಕ ನಡೆದಿದ್ದು 37 ಲಕ್ಷರೂ. ಸಂಗ್ರಹವಾಗಿದ್ದು ಡಾಲರ್ ಗಳನ್ನು ವಿದೇಶಿ ಭಕ್ತರು ಅರ್ಪಿಸಿದ್ದಾರೆ.
ಕಳೆದ 3 ತಿಂಗಳ ಬಳಿಕ ನಡೆದ ಹುಂಡಿ ಎಣಿಕೆಯಲ್ಲಿ 37,74,562 ರೂ. ಹಣ ಸಂಗ್ರಹವಾಗಿದ್ದು, 200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್ ಕೂಡ ರಂಗನಾಥನಿಗೆ ಭಕ್ತರು ಅರ್ಪಿಸಿದ್ದಾರೆ. ವಿದೇಶಿಗರು ಇಲ್ಲಿನ ಬೆಟ್ಟಕ್ಕೆ ಭೇಟಿ ಕೊಡುವುದರಿಂದ ಹುಂಡಿಯಲ್ಲಿ ಡಾಲರ್ ಪತ್ತೆಯಾಗಿದೆ.
11 ಸಣ್ಣ ಮಾಂಗಲ್ಯ, 1 ಬೆಳ್ಳಿ ಮುಖವಾಡ, 1 ಪುಟಾಣಿ ಘಂಟೆ- ಆರತಿ, 2 ಬೆಳ್ಳಿ ಕೊಳಲು, 2 ದೇವರ ಮೂರ್ತಿಯನ್ನು ಹರಕೆ ಕೊತ್ತ ಭಕ್ತರು ಕಾಣಿಕೆ ರೂಪದಲ್ಲಿ ಸ್ವಾಮಿಗೆ ಅರ್ಪಿಸಿದ್ದಾರೆ ಎಂದು ಇಒ ಮೋಹನ್ ತಿಳಿಸಿದ್ದಾರೆ.
ಸತತ ಮಳೆ ಪರಿಣಾಮ ಹಸಿರಿನ ಚೆಲುವಿನಿಂದ ಬಿಳಿಗಿರಿರಂಗನ ಬೆಟ್ಟ ಕಂಗೊಳಿಸುತ್ತಿದ್ದು ಭಕ್ತರು, ಪ್ರವಾಸಿಗರ ಸಂಖ್ಯೆ ದ್ವಿಗುಣಗೊಂಡಿದೆ. ವಾರಾಂತ್ಯದಲ್ಲಿ ಪ್ರಕೃತಿ ಚೆಲುವು ಕಣ್ತುಂಬಿಕೊಳ್ಳಲು ಜನಕಿಕ್ಕಿರಿದು ಸೇರುತ್ತಿದ್ದಾರೆ.
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…