ಚಾಮರಾಜನಗರ

ಚಾ.ನಗರ | ಪತಿಯಿಂದ ಪತ್ನಿಯ ಕೊಲೆ : ಪಟ್ಟಣ ಪೊಲೀಸ್ ಠಾಣೆ ಬಳಿ ಕುಡುಗೋಲಿನಿಂದ ಹೊಡೆದು ಹತ್ಯೆ

ಚಾಮರಾಜನಗರ: ನಗರದ ಪಟ್ಟಣ ಪೊಲೀಸ್ ಠಾಣೆ ಸಮೀಪ ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ನಗರದ ಸೋಮವಾರಪೇಟೆ ಬಡಾವಣೆಯ ವಿದ್ಯಾ (26) ಎಂಬಾಕೆಯನ್ನು ಆತನ ಪತಿ ಗಿರೀಶ್ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಈಕೆ ಮಂಗಳವಾರ ಮಧ್ಯಾಹ್ನ ಪತಿ ಗಿರೀಶ್ ನನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿ ವಾಪಸ್ ನಡೆದುಕೊಂಡು ಬಂದಿದ್ದಾರೆ. ಕಾನೂನು ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿಯನ್ನು ದಾಟಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ತೆರಳುತ್ತಿದ್ದರು. ಇದೇ ವೇಳೆ ಪತ್ನಿ ವಿದ್ಯಾಳನ್ನು ಅಡ್ಡಗಟ್ಟಿದ ಗಿರೀಶ್ ಆಕೆಯ ಮೇಲೆ ಹರಿತವಾದ ಕುಡುಗೋಲಿನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಆಕೆ ಕೈ ಅಡ್ಡ ನೀಡಿದ್ದರಿಂದ ಬಲವಾದ ಪೆಟ್ಟು ಬಿದ್ದು ರಕ್ತ ಸೋರುತ್ತಿತ್ತು. ಆಕೆ ಭಯಭೀತಳಾಗಿ ತಪ್ಪಿಸಿಕೊಳ್ಳಲು ಓಡಿದ್ದಾರೆ.

ಸಮೀಪವೇ ಇದ್ದ ಶೆಟ್ಟಿಸ್ ಕೆಫೆ ಎದುರು ಆಕೆ ಆಯತಪ್ಪಿ ಬಿದ್ದಿದ್ದಾರೆ. ತಕ್ಷಣ ಗಿರೀಶ್ ಪತ್ನಿಯ ಕುತ್ತಿಗೆ, ಭುಜ, ತಲೆಗೆ ಹಲ್ಲೆ ಮಾಡಿದ್ದರಿಂದ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಕೆಫೆ ಹುಡುಗರು ಹಲ್ಲೆ ತಡೆಯಲು ಯತ್ನಿಸಿದರೂ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾನೆ. ಬಳಿಕ ಗಿರೀಶ್ ಕುಡುಗೋಲು ಬಿಸಾಡಿ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯತ್ತ ಓಡಿಹೋಗಿ ತಲೆ ಮರೆಸಿಕೊಂಡಿದ್ದಾನೆ.

ಕೂಡಲೇ ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಆಂಬ್ಯುಲೆನ್ಸ್‌ನಲ್ಲಿ ಹಾಕಿಕೊಂಡು ನಗರದ ಹೊರವಲಯದ ಸಿಮ್ಸ್ ಬೋಧನಾ ಆಸ್ಪತ್ರೆಗೆ ಸಾಗಿಸಿದರು.

ವಿಷಯ ತಿಳಿದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಎಎಸ್ಪಿ ಶಶಿಧರ್, ಡಿವೈಎಸ್ಪಿ ಲಕ್ಷ್ಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಬೆರಳಚ್ಚು ತಜ್ಞರು ಆಗಮಿಸಿ ಸ್ಥಳ ಮಹಜರು ನಡೆಸಿದರು.

ಘಟನೆ ಹಿನ್ನೆಲೆ : ನಗರದ ಕರಿನಂಜನಪುರ ಬಡಾವಣೆಯ ವಿದ್ಯಾ ಅವರು ಸೋಮವಾರಪೇಟೆಯ ಗಿರೀಶ್ ಜೊತೆ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಕೆಲವು ದಿನಗಳ ಹಿಂದೆ ಈಕೆ ಪರ ಪುರುಷನೊಂದಿಗೆ ಓಡಿ ಹೋಗಿದ್ದರು. ಬಳಿಕ ವಾಪಸ್ ಬಂದ ಆಕೆಯನ್ನು ತವರು ಮನೆಯವರು ಮತ್ತು ಪತಿ ತಮ್ಮ ಜೊತೆ ಸೇರಿಸಿಕೊಂಡಿರಲಿಲ್ಲ ಎನ್ನಲಾಗಿದೆ.

ಬಳಿಕ ಆಕೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ಇತ್ತೀಚೆಗೆ ತನ್ನ ಮೊಬೈಲ್ ಅನ್ನು ಪತಿಯಿಂದ ಪಡೆದುಕೊಂಡಿದ್ದಳು. ಸೋಮವಾರ ಪತಿ ಗಿರೀಶ್ ಸಾಂತ್ವನ ಕೇಂದ್ರಕ್ಕೆ ತೆರಳಿ ಮೊಬೈಲ್ ವಾಪಸ್ ನೀಡುವಂತೆ ಒತ್ತಾಯ ಮಾಡಿ ಗಲಾಟೆ ನಡೆಸಿದ್ದನು. ಈ ಕಾರಣದಿಂದ ವಿದ್ಯಾ ತನ್ನ ಪತಿ ವಿರುದ್ಧ ಕಿರುಕುಳ ದೂರು ನೀಡಿ ವಾಪಸ್ ಬರುವಾಗ ಘಟನೆ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago