ಚಾಮರಾಜನಗರ

ಚಾಮರಾಜನಗರ | ಪತಿಯಿಂದಲೇ ಪತ್ನಿಯ ಕೊಲೆ: ಕಾರಣ ಇಷ್ಟೇ

ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ದೊಳ್ಳಿಪುರ ಗ್ರಾಮದಲ್ಲಿ ನಡೆದಿದೆ.

ಶುಭಾ ಎಂಬುವವರೇ ಪತಿಯಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಮಹೇಶ್‌ ಎಂಬಾತನೇ ಪತ್ನಿಯನ್ನು ಕೊಲೆ ಮಾಡಿದ ಆರೋಪಿ.

ಜೂನ್.‌30ರಂದು ಪತ್ನಿಯನ್ನು ಎಚ್.ಡಿ.ಫಾರೆಸ್ಟ್‌ನ ಡೊಳ್ಳಿಪುರದಲ್ಲಿ ಹತ್ಯೆ ಮಾಡಿದ್ದ ಹಂತಕ ಮಹೇಶ್‌, ಪೊಲೀಸರಿಗೆ ಖುದ್ದು ಕರೆ ಮಾಡಿ ಯಾರೋ ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದನು.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಹೇಶ್‌ನನ್ನು ವಿಚಾರಣೆ ನಡೆಸುತ್ತಾರೆ. ಈ ವೇಳೆ ಮಹೇಶ್‌ ಮನಬಂದಂತೆ ಮಾತನಾಡುತ್ತಿದ್ದ. ಅಲ್ಲದೇ ಆತನ ಶರ್ಟ್‌ ಮೇಲೆ ರಕ್ತದ ಕಲೆ ಇರುವುದು ಕಂಡು ಬಂದಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು ಮಹೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಪತ್ನಿಯನ್ನು ಕೊಂದಿದ್ದಾಗಿ ಬಾಯ್ಬಿಟ್ಟಿದ್ದಾನೆ.

ಪತ್ನಿ ಗರ್ಭಿಣಿಯಾಗಿದ್ದಳು. ನನಗೆ ಮಕ್ಕಳಾಗುವುದು ಇಷ್ಟವಿರಲಿಲ್ಲ. ಆದರೆ ಕೆಲ ದಿನಗಳ ಹಿಂದೆ ತಾನು ಗರ್ಭಿಣಿ ಎಂಬ ವಿಚಾರವನ್ನು ಹೇಳಿದ್ದಳು. ಅಲ್ಲದೇ ಮಗುವನ್ನು ಉಳಿಸಿಕೊಳ್ಳಲು ಆಕೆ ಸಾಕಷ್ಟು ಯತ್ನಿಸಿದ್ದಳು. ಇದೇ ಕಾರಣಕ್ಕೆ ಕೋಪಗೊಂಡಿದ್ದ ಮಹೇಶ ವ್ಯವಸ್ಥಿತವಾಗಿ ಸಂಚುರೂಪಿಸಿ ತೋಟದ ಮನೆಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಬಳಿಕ ಇದರ ಬಗ್ಗೆ ತನಗೇನೂ ಗೊತ್ತಿಲ್ಲ ಎಂದು ಕಥೆ ಕಟ್ಟಿ, ಆರ್ಥಿಕ ಸಮಸ್ಯೆ ಕಾರಣಕ್ಕೆ ಮಕ್ಕಳಾಗುವುದು ಇಷ್ಟವಿಲ್ಲವೆಂದು ಪತ್ನಿಯನ್ನು ಕೊಂದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

6 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

6 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

7 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago