Husband murders wife chamarajanagar
ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ದೊಳ್ಳಿಪುರ ಗ್ರಾಮದಲ್ಲಿ ನಡೆದಿದೆ.
ಶುಭಾ ಎಂಬುವವರೇ ಪತಿಯಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಮಹೇಶ್ ಎಂಬಾತನೇ ಪತ್ನಿಯನ್ನು ಕೊಲೆ ಮಾಡಿದ ಆರೋಪಿ.
ಜೂನ್.30ರಂದು ಪತ್ನಿಯನ್ನು ಎಚ್.ಡಿ.ಫಾರೆಸ್ಟ್ನ ಡೊಳ್ಳಿಪುರದಲ್ಲಿ ಹತ್ಯೆ ಮಾಡಿದ್ದ ಹಂತಕ ಮಹೇಶ್, ಪೊಲೀಸರಿಗೆ ಖುದ್ದು ಕರೆ ಮಾಡಿ ಯಾರೋ ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದನು.
ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಹೇಶ್ನನ್ನು ವಿಚಾರಣೆ ನಡೆಸುತ್ತಾರೆ. ಈ ವೇಳೆ ಮಹೇಶ್ ಮನಬಂದಂತೆ ಮಾತನಾಡುತ್ತಿದ್ದ. ಅಲ್ಲದೇ ಆತನ ಶರ್ಟ್ ಮೇಲೆ ರಕ್ತದ ಕಲೆ ಇರುವುದು ಕಂಡು ಬಂದಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು ಮಹೇಶ್ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಪತ್ನಿಯನ್ನು ಕೊಂದಿದ್ದಾಗಿ ಬಾಯ್ಬಿಟ್ಟಿದ್ದಾನೆ.
ಪತ್ನಿ ಗರ್ಭಿಣಿಯಾಗಿದ್ದಳು. ನನಗೆ ಮಕ್ಕಳಾಗುವುದು ಇಷ್ಟವಿರಲಿಲ್ಲ. ಆದರೆ ಕೆಲ ದಿನಗಳ ಹಿಂದೆ ತಾನು ಗರ್ಭಿಣಿ ಎಂಬ ವಿಚಾರವನ್ನು ಹೇಳಿದ್ದಳು. ಅಲ್ಲದೇ ಮಗುವನ್ನು ಉಳಿಸಿಕೊಳ್ಳಲು ಆಕೆ ಸಾಕಷ್ಟು ಯತ್ನಿಸಿದ್ದಳು. ಇದೇ ಕಾರಣಕ್ಕೆ ಕೋಪಗೊಂಡಿದ್ದ ಮಹೇಶ ವ್ಯವಸ್ಥಿತವಾಗಿ ಸಂಚುರೂಪಿಸಿ ತೋಟದ ಮನೆಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಬಳಿಕ ಇದರ ಬಗ್ಗೆ ತನಗೇನೂ ಗೊತ್ತಿಲ್ಲ ಎಂದು ಕಥೆ ಕಟ್ಟಿ, ಆರ್ಥಿಕ ಸಮಸ್ಯೆ ಕಾರಣಕ್ಕೆ ಮಕ್ಕಳಾಗುವುದು ಇಷ್ಟವಿಲ್ಲವೆಂದು ಪತ್ನಿಯನ್ನು ಕೊಂದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ರೋಮ್ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…
ಮೈಸೂರು : ಪಬ್ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್ನಲ್ಲಿ…
ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…
ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್ ಮೈಂಡ್ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು…