Husband murders wife chamarajanagar
ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ದೊಳ್ಳಿಪುರ ಗ್ರಾಮದಲ್ಲಿ ನಡೆದಿದೆ.
ಶುಭಾ ಎಂಬುವವರೇ ಪತಿಯಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಮಹೇಶ್ ಎಂಬಾತನೇ ಪತ್ನಿಯನ್ನು ಕೊಲೆ ಮಾಡಿದ ಆರೋಪಿ.
ಜೂನ್.30ರಂದು ಪತ್ನಿಯನ್ನು ಎಚ್.ಡಿ.ಫಾರೆಸ್ಟ್ನ ಡೊಳ್ಳಿಪುರದಲ್ಲಿ ಹತ್ಯೆ ಮಾಡಿದ್ದ ಹಂತಕ ಮಹೇಶ್, ಪೊಲೀಸರಿಗೆ ಖುದ್ದು ಕರೆ ಮಾಡಿ ಯಾರೋ ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದನು.
ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಹೇಶ್ನನ್ನು ವಿಚಾರಣೆ ನಡೆಸುತ್ತಾರೆ. ಈ ವೇಳೆ ಮಹೇಶ್ ಮನಬಂದಂತೆ ಮಾತನಾಡುತ್ತಿದ್ದ. ಅಲ್ಲದೇ ಆತನ ಶರ್ಟ್ ಮೇಲೆ ರಕ್ತದ ಕಲೆ ಇರುವುದು ಕಂಡು ಬಂದಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು ಮಹೇಶ್ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಪತ್ನಿಯನ್ನು ಕೊಂದಿದ್ದಾಗಿ ಬಾಯ್ಬಿಟ್ಟಿದ್ದಾನೆ.
ಪತ್ನಿ ಗರ್ಭಿಣಿಯಾಗಿದ್ದಳು. ನನಗೆ ಮಕ್ಕಳಾಗುವುದು ಇಷ್ಟವಿರಲಿಲ್ಲ. ಆದರೆ ಕೆಲ ದಿನಗಳ ಹಿಂದೆ ತಾನು ಗರ್ಭಿಣಿ ಎಂಬ ವಿಚಾರವನ್ನು ಹೇಳಿದ್ದಳು. ಅಲ್ಲದೇ ಮಗುವನ್ನು ಉಳಿಸಿಕೊಳ್ಳಲು ಆಕೆ ಸಾಕಷ್ಟು ಯತ್ನಿಸಿದ್ದಳು. ಇದೇ ಕಾರಣಕ್ಕೆ ಕೋಪಗೊಂಡಿದ್ದ ಮಹೇಶ ವ್ಯವಸ್ಥಿತವಾಗಿ ಸಂಚುರೂಪಿಸಿ ತೋಟದ ಮನೆಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಬಳಿಕ ಇದರ ಬಗ್ಗೆ ತನಗೇನೂ ಗೊತ್ತಿಲ್ಲ ಎಂದು ಕಥೆ ಕಟ್ಟಿ, ಆರ್ಥಿಕ ಸಮಸ್ಯೆ ಕಾರಣಕ್ಕೆ ಮಕ್ಕಳಾಗುವುದು ಇಷ್ಟವಿಲ್ಲವೆಂದು ಪತ್ನಿಯನ್ನು ಕೊಂದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…