Husband murders wife chamarajanagar
ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ದೊಳ್ಳಿಪುರ ಗ್ರಾಮದಲ್ಲಿ ನಡೆದಿದೆ.
ಶುಭಾ ಎಂಬುವವರೇ ಪತಿಯಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಮಹೇಶ್ ಎಂಬಾತನೇ ಪತ್ನಿಯನ್ನು ಕೊಲೆ ಮಾಡಿದ ಆರೋಪಿ.
ಜೂನ್.30ರಂದು ಪತ್ನಿಯನ್ನು ಎಚ್.ಡಿ.ಫಾರೆಸ್ಟ್ನ ಡೊಳ್ಳಿಪುರದಲ್ಲಿ ಹತ್ಯೆ ಮಾಡಿದ್ದ ಹಂತಕ ಮಹೇಶ್, ಪೊಲೀಸರಿಗೆ ಖುದ್ದು ಕರೆ ಮಾಡಿ ಯಾರೋ ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದನು.
ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಹೇಶ್ನನ್ನು ವಿಚಾರಣೆ ನಡೆಸುತ್ತಾರೆ. ಈ ವೇಳೆ ಮಹೇಶ್ ಮನಬಂದಂತೆ ಮಾತನಾಡುತ್ತಿದ್ದ. ಅಲ್ಲದೇ ಆತನ ಶರ್ಟ್ ಮೇಲೆ ರಕ್ತದ ಕಲೆ ಇರುವುದು ಕಂಡು ಬಂದಿತ್ತು. ಈ ವೇಳೆ ಅನುಮಾನಗೊಂಡ ಪೊಲೀಸರು ಮಹೇಶ್ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಪತ್ನಿಯನ್ನು ಕೊಂದಿದ್ದಾಗಿ ಬಾಯ್ಬಿಟ್ಟಿದ್ದಾನೆ.
ಪತ್ನಿ ಗರ್ಭಿಣಿಯಾಗಿದ್ದಳು. ನನಗೆ ಮಕ್ಕಳಾಗುವುದು ಇಷ್ಟವಿರಲಿಲ್ಲ. ಆದರೆ ಕೆಲ ದಿನಗಳ ಹಿಂದೆ ತಾನು ಗರ್ಭಿಣಿ ಎಂಬ ವಿಚಾರವನ್ನು ಹೇಳಿದ್ದಳು. ಅಲ್ಲದೇ ಮಗುವನ್ನು ಉಳಿಸಿಕೊಳ್ಳಲು ಆಕೆ ಸಾಕಷ್ಟು ಯತ್ನಿಸಿದ್ದಳು. ಇದೇ ಕಾರಣಕ್ಕೆ ಕೋಪಗೊಂಡಿದ್ದ ಮಹೇಶ ವ್ಯವಸ್ಥಿತವಾಗಿ ಸಂಚುರೂಪಿಸಿ ತೋಟದ ಮನೆಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಬಳಿಕ ಇದರ ಬಗ್ಗೆ ತನಗೇನೂ ಗೊತ್ತಿಲ್ಲ ಎಂದು ಕಥೆ ಕಟ್ಟಿ, ಆರ್ಥಿಕ ಸಮಸ್ಯೆ ಕಾರಣಕ್ಕೆ ಮಕ್ಕಳಾಗುವುದು ಇಷ್ಟವಿಲ್ಲವೆಂದು ಪತ್ನಿಯನ್ನು ಕೊಂದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…