Husband stabbed wife
ಹನೂರು: ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳ್ಯದ ಬಯಲು ಗ್ರಾಮದಲ್ಲಿ ಪತಿಯೇ ಪತ್ನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬುಧವಾರ ಬೆಳಗ್ಗೆ ಜರುಗಿದೆ.
ತಾಲೂಕಿನ ಒಡೆಯರ ಪಾಳ್ಯ ಸಮೀಪದ ಗುಳ್ಯದ ಬಯಲು ಗ್ರಾಮದ ನಿವಾಸಿ ಭದ್ರಾ ಎಂಬುವನು ತನ್ನ ಪತ್ನಿ ಮಾದೇವಿಗೆ ಚಾಕು ಹಿರಿದು ಹತ್ಯೆ ಮಾಡಿದ್ದಾನೆ.
ಭದ್ರಾ ಹಾಗೂ ಮಾದೇವಿ ದಂಪತಿಗಳ ಮಧ್ಯ ಆಗಾಗ ಕಲಹ ನಡೆಯುತ್ತಿತ್ತು ಎಂದು ತಿಳಿದು ಬಂದಿದ್ದು ತಡ ರಾತ್ರಿಯು ಕಲಹ ನಡೆದು ಗಂಡ ಭದ್ರಾ ಕೋಪಗೊಂಡು ಮಾದೇವಿಗೆ ಚಾಕು ಹಿರಿದು ಹತ್ಯೆ ಮಾಡಿದ್ದಾನೆ ಎಂದು ಮೃತ ಮಾದೇವಿಯ ಸಹೋದರ ಮಾದಪ್ಪ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:- ಕೊಡಗಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ
ಪ್ರಕರಣ ದಾಖಲಾಗುತ್ತಿದ್ದಂತೆ ಇನ್ಸ್ಪೆಕ್ಟರ್ ಆನಂದಮೂರ್ತಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃತ ಮಾದೇವಿ ಪತಿ ಭದ್ರಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯ ನಂತರ ಕೊಲೆಗೆ ನಿಖರ ಕಾರಣ ತಿಳಿದು ಬರಲಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…