Husband stabbed wife
ಹನೂರು: ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳ್ಯದ ಬಯಲು ಗ್ರಾಮದಲ್ಲಿ ಪತಿಯೇ ಪತ್ನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬುಧವಾರ ಬೆಳಗ್ಗೆ ಜರುಗಿದೆ.
ತಾಲೂಕಿನ ಒಡೆಯರ ಪಾಳ್ಯ ಸಮೀಪದ ಗುಳ್ಯದ ಬಯಲು ಗ್ರಾಮದ ನಿವಾಸಿ ಭದ್ರಾ ಎಂಬುವನು ತನ್ನ ಪತ್ನಿ ಮಾದೇವಿಗೆ ಚಾಕು ಹಿರಿದು ಹತ್ಯೆ ಮಾಡಿದ್ದಾನೆ.
ಭದ್ರಾ ಹಾಗೂ ಮಾದೇವಿ ದಂಪತಿಗಳ ಮಧ್ಯ ಆಗಾಗ ಕಲಹ ನಡೆಯುತ್ತಿತ್ತು ಎಂದು ತಿಳಿದು ಬಂದಿದ್ದು ತಡ ರಾತ್ರಿಯು ಕಲಹ ನಡೆದು ಗಂಡ ಭದ್ರಾ ಕೋಪಗೊಂಡು ಮಾದೇವಿಗೆ ಚಾಕು ಹಿರಿದು ಹತ್ಯೆ ಮಾಡಿದ್ದಾನೆ ಎಂದು ಮೃತ ಮಾದೇವಿಯ ಸಹೋದರ ಮಾದಪ್ಪ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:- ಕೊಡಗಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ
ಪ್ರಕರಣ ದಾಖಲಾಗುತ್ತಿದ್ದಂತೆ ಇನ್ಸ್ಪೆಕ್ಟರ್ ಆನಂದಮೂರ್ತಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃತ ಮಾದೇವಿ ಪತಿ ಭದ್ರಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯ ನಂತರ ಕೊಲೆಗೆ ನಿಖರ ಕಾರಣ ತಿಳಿದು ಬರಲಿದೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…