ಚಾಮರಾಜನಗರ: ನಿನ್ನ ತಲೆಯಲ್ಲಿ ಕೂದಲಿಲ್ಲ. ನೀನು ನೋಡಲು ಚೆನ್ನಾಗಿಲ್ಲ ಎಂದು ಪತ್ನಿ ಪದೇ ಪದೇ ನೀಡುತ್ತಿದ್ದ ಟಾರ್ಚರ್ನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ.
ಪರಶಿವ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಎಲ್ಲರ ಎದುರು ಪತ್ನಿ ಪದೇ ಪದೇ ಅವಮಾನ ಮಾಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.
ಅಲ್ಲದೇ ಹೈಫೈ ಜೀವನ ಮಾಡಲು ಬಯಸಿದ್ದ ಪತ್ನಿ, ರೀಲ್ಸ್ಗಳ ಗೀಳಿನಲ್ಲೇ ಮುಳುಗಿಹೋಗಿದ್ದಳು ಎನ್ನಲಾಗಿದೆ.
ಪದೇ ಪದೇ ಬಟ್ಟೆ ಕೊಡಿಸು, ಆಭರಣ ಕೊಡಿಸು ಎಂದು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಳು. ಇದಲ್ಲದೇ ಪತಿಯ ಮೇಲೆಯೇ ಸುಳ್ಳು ಕೇಸ್ ಹಾಕಿ ಒಂದೂವರೆ ತಿಂಗಳು ಜೈಲಿಗೂ ಕೂಡ ಕಳಿಸಿದ್ದಳು.
ಈ ಹಿನ್ನೆಲೆಯಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತು ಪರಶಿವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…