ಚಾಮರಾಜನಗರ: ನಿನ್ನ ತಲೆಯಲ್ಲಿ ಕೂದಲಿಲ್ಲ. ನೀನು ನೋಡಲು ಚೆನ್ನಾಗಿಲ್ಲ ಎಂದು ಪತ್ನಿ ಪದೇ ಪದೇ ನೀಡುತ್ತಿದ್ದ ಟಾರ್ಚರ್ನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ.
ಪರಶಿವ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಎಲ್ಲರ ಎದುರು ಪತ್ನಿ ಪದೇ ಪದೇ ಅವಮಾನ ಮಾಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.
ಅಲ್ಲದೇ ಹೈಫೈ ಜೀವನ ಮಾಡಲು ಬಯಸಿದ್ದ ಪತ್ನಿ, ರೀಲ್ಸ್ಗಳ ಗೀಳಿನಲ್ಲೇ ಮುಳುಗಿಹೋಗಿದ್ದಳು ಎನ್ನಲಾಗಿದೆ.
ಪದೇ ಪದೇ ಬಟ್ಟೆ ಕೊಡಿಸು, ಆಭರಣ ಕೊಡಿಸು ಎಂದು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಳು. ಇದಲ್ಲದೇ ಪತಿಯ ಮೇಲೆಯೇ ಸುಳ್ಳು ಕೇಸ್ ಹಾಕಿ ಒಂದೂವರೆ ತಿಂಗಳು ಜೈಲಿಗೂ ಕೂಡ ಕಳಿಸಿದ್ದಳು.
ಈ ಹಿನ್ನೆಲೆಯಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತು ಪರಶಿವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…