ಚಾಮರಾಜನಗರ: ನಿನ್ನ ತಲೆಯಲ್ಲಿ ಕೂದಲಿಲ್ಲ. ನೀನು ನೋಡಲು ಚೆನ್ನಾಗಿಲ್ಲ ಎಂದು ಪತ್ನಿ ಪದೇ ಪದೇ ನೀಡುತ್ತಿದ್ದ ಟಾರ್ಚರ್ನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ.
ಪರಶಿವ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಎಲ್ಲರ ಎದುರು ಪತ್ನಿ ಪದೇ ಪದೇ ಅವಮಾನ ಮಾಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.
ಅಲ್ಲದೇ ಹೈಫೈ ಜೀವನ ಮಾಡಲು ಬಯಸಿದ್ದ ಪತ್ನಿ, ರೀಲ್ಸ್ಗಳ ಗೀಳಿನಲ್ಲೇ ಮುಳುಗಿಹೋಗಿದ್ದಳು ಎನ್ನಲಾಗಿದೆ.
ಪದೇ ಪದೇ ಬಟ್ಟೆ ಕೊಡಿಸು, ಆಭರಣ ಕೊಡಿಸು ಎಂದು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಳು. ಇದಲ್ಲದೇ ಪತಿಯ ಮೇಲೆಯೇ ಸುಳ್ಳು ಕೇಸ್ ಹಾಕಿ ಒಂದೂವರೆ ತಿಂಗಳು ಜೈಲಿಗೂ ಕೂಡ ಕಳಿಸಿದ್ದಳು.
ಈ ಹಿನ್ನೆಲೆಯಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತು ಪರಶಿವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…
ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ…