ಗುಂಡ್ಲುಪೇಟೆ : ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಭಾರಿ ಭೇಟಿ ನೀಡಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂದು ಪ್ರಾಸಂಗಿಕವಾಗಿ ಹೇಳಿದ್ದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅವರು ಮಂಗಳವಾರ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಸಕ ಹ್ಯಾರೀಸ್ ಅವರ ಪುತ್ರ ನಲಪಾಡ್ ಅವರ ಮನೆ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಕಾಂಗ್ರೆಸ್ ಅವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದವರೇ ಅದನ್ನು ಘೋಷಣೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವಿರೋಧಿಸುತ್ತಿದ್ದವರಿಗೆ ಗ್ಯಾರಂಟಿಗಳು ಬಡವರ ಕಾರ್ಯಕ್ರಮಗಳೆಂದು ಗೊತ್ತಾಗಿದೆ ಎಂದರು.
ಎಲ್ಲರಿಗೂ ಪರಿಹಾರ ಕೊಡುತ್ತೇವೆ
ಸಿಎಂ ತಮ್ಮ ಕ್ಷೇತ್ರದಲ್ಲಿ ಸತ್ತವರಿಗೆ ಮಾತ್ರ ಪರಿಹಾರ ನೀಡುತ್ತಿರುವ ಬಗ್ಗೆ ಜೆಡಿಎಸ್ ಶಾಸಕ ಶರಣಗೌಡ ಚಂದಾಪುರ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಎಲ್ಲರಿಗೂ ನೀಡಲಾಗುತ್ತಿದೆ, ನಮ್ಮ ಗಮನಕ್ಕೆ ಬಂದರೆ ಪರಿಹಾರ ನೀಡುತ್ತೇವೆ. ಶಾಸಕರು ಕೇಳಿದರೂ ಖಂಡಿತ ಕೊಡುತ್ತೇವೆ ಎಂದರು.
ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ
ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73, 74 ನೇ ತಿದ್ದುಪಡಿಗಳನ್ನು ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದು ಕಾಂಗ್ರೆಸ್. ಅದನ್ನು ರಾಜ್ಯಸಭೆಯಲ್ಲಿ ಕೆಡವಿದವರು ಎನ್.ಡಿ. ಎ ಈಗ ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಸೇರಿಸಿ ಮಸೂದೆ ಮಂಡಿಸಿದ್ದಾರೆ . ನಮ್ಮದು ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ ಎಂದರು.
ತೃತೀಯ ಭಾಷೆಗೆ ಅಂಕ : ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲಾಗುವುದು
ತೃತೀಯ ಭಾಷೆಗೆ ಹಿಂದಿನ ವರ್ಷಗಳಂತೆಯೇ ಮೌಲ್ಯಮಾಪನ ಮಾಡಿ ಅಂಕಗಳನ್ನು ನೀಡಬೇಕೆಂದು ಉಚ್ಚ ನ್ಯಾಯಾಲಯ ಹೇಳಿದ್ದು, ಮುಂದಿನ ತೀರ್ಮಾನ ಮಾಡಲು ಸೂಚಿಸಿದ್ದು, ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲಾಗುವುದು ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…