ಚಾಮರಾಜನಗರ

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜೊತೆ ಚರ್ಚೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅನ್ಯ ಕಾರ್ಯ ನಿಮಿತ್ತ ಹನೂರು ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಸಂತ ಸೇವಾಲಾಲರ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗಿಲ್ಲ ಆದರೂ ಅವರ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗಿದೆ. ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ ಅವರು ಮಾಡುವ ಎಲ್ಲಾ ಕಾರ್ಯಕ್ರಮಗಳಿಗೂ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಬಂಜಾರ ಸಮುದಾಯದ ತಾಂಡಗಳಿಗೆ ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯ ಇಲ್ಲದೆ ಇರುವುದು ಗಮನಕ್ಕೆ ಬಂದಿದ್ದು ಸಂಬಂಧ ಪಟ್ಟ ಸಚಿವರ ಜೊತೆ ಚರ್ಚೆ ನಡೆಸಿ ಬಂಜಾರ ಸಮುದಾಯಕ್ಕೆ ವಿಶೇಷ ಅನುದಾನ ಕೊಡಿಸಲು ಬದ್ಧನಾಗಿದ್ದೇನೆ ಅದೇ ರೀತಿ ಬಂಜಾರ ಸಮುದಾಯದವರಿಗೆ ವೈಯಕ್ತಿಕವಾಗಿಯು ಸಹಾಯ ಮಾಡುವುದಾಗಿ ತಿಳಿಸಿದರು.

ಬಂಜಾರ ಸಮುದಾಯದವರು ಸಮುದಾಯದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹನೂರು ತಾಲೂಕು ಕೇಂದ್ರದಲ್ಲಿ ಸಮುದಾಯ ಭವನ ಹಾಗೂ ಬಂಜಾರ ಸಮುದಾಯದವರಿಗೆ ಸ್ಮಶಾನ ಇಲ್ಲದೆ ಇರುವ ಬಗ್ಗೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿರುವುದರಿಂದ ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತಕ್ಕೆ ಮನವಿ ಮಾಡಲಾಗುವುದು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago