ಚಾಮರಾಜನಗರ

ಹೂತಿದ್ದ ಮಹಿಳೆಯರ ಶವ ಗುರುತು ಪತ್ತೆ ; ಕೊಲೆ ಶಂಕೆ : ತನಿಖೆ ಚುರುಕು

ಕೊಳ್ಳೇಗಾಲ : ಹಳೇ ಹಂಪಾಪುರದ ಸುವರ್ಣಾವತಿ ನದಿ ದಡದಲ್ಲಿ ಕೈ ಕಾಣುವಂತೆ ಹೂತಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ.

ಈಕೆ ಕೊಳ್ಳೇಗಾಲ ಮೋಳೆ ಬಡಾವಣೆಯ ವಿಜಯ್ ಕುಮಾರ್ ಅವರ ಪತ್ನಿ ಸೋನಾಕ್ಷಿ (29) ಎಂದು ಗುರುತಿಸಲಾಗಿದೆ.

ಪೊಲೀಸರ ವಿಚಾರಣೆಯ ನಂತರ ಈಕೆ ಅದೇ ಬಡಾವಣೆಯ ಮಹೇಶ್ ಹಾಗೂ ಬಾಬು ಎಂಬವರ ಜೊತೆ ಅನೈತಿಕ ಸಂಬಂಧ ಹೊಂದಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಆಕೆಯ ಪತಿ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದಾರೆ.

ಮೃತರ ಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ಮಹಿಳೆಯನ್ನು ಕೊಲೆ ಮಾಡಿರುವರು ಯಾರು? ಏಕೆ ಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಕ್ರಮವಾಗಿ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಶವವನ್ನು ಹೆಚ್ಚು ಆಳದಲ್ಲಿ ಹೂಳದೆ ಮಣ್ಣು ಮುಚ್ಚಿದ್ದರಿಂದ ನಾಯಿಗಳು ಸಮಾಧಿ ಮಣ್ಣನ್ನು ತೆರೆದು ಕೈ ಬೆರಳುಗಳನ್ನು ಕಚ್ಚಿವೆ. ಇದು ವಾಮಾಚಾರವಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಚಾ.ನಗರ ಸಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ವಾರಸುದಾರರಿಗೆ ನೀಡಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ತನಿಖೆಯನ್ನು ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

9 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

9 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

9 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

9 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

10 hours ago