ಚಾಮರಾಜನಗರ

ಜೆಡಿಎಸ್‌ನಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ

ಚಾಮರಾಜನಗರ : ಒಂದು ವೇಳೆ ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ, ನಾನು ಜೆಡಿಎಸ್‌ನಲ್ಲಿದ್ದಿದ್ದರೇ ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.

ಇದಕ್ಕೂ ಮುನ್ನ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದ, ಅವರು ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ನುಡಿದರು.

ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು.

ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಇದನ್ನೂ ಓದಿ:-ಕದನ ವಿರಾಮ ನಡುವೆಯೇ ಗಾಜಾ ಮೇಲೆ ಇಸ್ರೇಲ್ ಬಾಂಬ್ ದಾಳಿ : 27 ಮಂದಿ ಸಾವು

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದ್ರೆ ಮಂತ್ರಿ ಸ್ಥಾನ ಹೋಗ್ತದೆ ಅನ್ನೋ ಕೆಟ್ಟ ಮೌಡ್ಯ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದರು.

ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್ ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರ ವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್ ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದರು.

ಸಭೆಯಲ್ಲಿ ಸಿಎಂ ಘೋಷಣೆಗಳು
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು
ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು

ಆಂದೋಲನ ಡೆಸ್ಕ್

Recent Posts

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

7 mins ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

44 mins ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

2 hours ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

2 hours ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

2 hours ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

3 hours ago