ಚಾಮರಾಜನಗರ

ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದರು.

ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು.

ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳುವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದ್ರೆ ಮಂತ್ರಿ ಸ್ಥಾನ ಹೋಗ್ತದೆ ಅನ್ನೋ ಕೆಟ್ಟ ಮೌಡ್ಯ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದರು.

ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.

ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್‌ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್‌ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago