ಚಾಮರಾಜನಗರ

ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದರು.

ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು.

ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳುವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದ್ರೆ ಮಂತ್ರಿ ಸ್ಥಾನ ಹೋಗ್ತದೆ ಅನ್ನೋ ಕೆಟ್ಟ ಮೌಡ್ಯ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದರು.

ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.

ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್‌ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್‌ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

7 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

11 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

11 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

12 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

12 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

13 hours ago