ಚಾಮರಾಜನಗರ: ಇತ್ತೀಚೆಗೆ ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮ್ಮ(ಎನ್ ಮಹೇಶ್) ಮೇಲೆ ಭ್ರಷ್ಠಾಚಾರ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಸೋಮವಾರ (ಏ.1) ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಅವರಿಗೆ ದೂರು ಸಲ್ಲಿಸಿದರು.
ಕೋಳ್ಳೆಗಾಲದ ಮಾಜಿ ಶಾಸಕ ಜಿ.ಎನ್ ನಂಜುಂಡಸ್ವಾಮಿ, ಸಚಿವ ಕೆ ವೆಂಕಟೇಶ್, ಎಚ್ ಸಿ ಮಹದೇವಪ್ಪ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಸೂಕ್ತ ಕ್ರಮಕ್ಕೆ ಅವರು ದೂರಿನಲ್ಲಿ ಆಗ್ರಹಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಮಹೇಶ್, ಮಾರ್ಚ್ 28 ರಂದು ಕೋಳ್ಳೆಗಾಲದಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ನಂಜುಂಡಸ್ವಾಮಿ ಅವರು ನಮ್ಮ ಬಿಜೆಪಿ ಅಭ್ಯರ್ಥಿ ಬಾಲರಾಜ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಜೊತೆಗೆ ನನ್ನ ಬಗ್ಗೆಯೂ ಮತನಾಡಿದ್ದಾರೆ. ಇಲ್ಲೊಬ್ಬ ಸಮಾಜಘಾತುಕ ಎನ್.ಮಹೇಶ್ ಇದ್ದಾರೆ. ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೆ ಏನು ಮಾಡಿಲ್ಲ ಎನ್ನುತ್ತಿದ್ದಾರೆ. ಮಹೇಶ್ ಶಿಕ್ಷಣ ಸಚಿವರಾಗಿದ್ದ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಕೊಡುವ ದುಡ್ಡಲ್ಲಿ ರೂ 30 ಕೋಟಿ ಲೂಟಿ ಹೊಡೆದಿದ್ದಾರೆ. ಈಗ ಬಾಲರಾಜ್ ಹಾಳು ಮಾಡಲು ಬಂದಿದ್ದೀರಿ ಎಂದು ಹೇಳಿದ್ದಾರೆ. ಇದು ಮಾಧ್ಯಮದಲ್ಲಿ ಸುದ್ದಿಯಾಗಿದೆ. ಇದು ನನ್ನ ಮಾನಹಾನಿ ಮಾಡುವಂತಹ ಮಾತು ಎಂದರು.
ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ನ್ಯಾಯಾಲಯದಲ್ಲೂ ಮೊಕದ್ದಮೆ ಹೂಡುವೆ. ಈ ಮೂವರು ಬಂದು ನಾನು ರೂ30 ಕೋಟಿ ಮೊತ್ತದ ಭ್ರಷ್ಟಾಚಾರ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ. ಇಲ್ಲದಿದ್ದರೆ ಅವರು ಮೂರು ವರ್ಷ ಜೈಲಿಗೆ ಹೋಗಲಿ ಎಂದು ಮಹೇಶ್ ಹೇಳಿದರು.
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…