ಚಾಮರಾಜನಗರ

ಮಹದೇಶ್ವರ ಬೆಟ್ಟ | ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯ ಪೊಲೀಸರ ವಶಕ್ಕೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಶೇಖರಣೆ ಮಾಡಿದ್ದ 90ಎಂ.ಎಲ್.ನ 14 ಕೇಸ್ ಮದ್ಯ ವನ್ನು ಮಹದೇಶ್ವರ ಬೆಟ್ಟ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮದ ಊರಬಸಪ್ಪವೊಡ್ಡಿನ ಗ್ರಾಮದ ನಿವಾಸಿಗಳಾದ ರಾಚಪ್ಪ ಆತನ ಸಹೋದರಿಯರಾದ ಲಕ್ಷ್ಮಿ ಮತ್ತು ಭದ್ರಮ್ಮ ಎಂಬುವರು ಆರೋಪಿಗಳಾಗಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ.

ಘಟನೆ ವಿವರ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ರಾಚಪ್ಪ ಎಂಬುವರ ಮನೆಯಲ್ಲಿ ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಜಗದೀಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ . ಆದರೆ ಮಾರಾಟಕ್ಕೆ ಶೇಖರಣೆ ಮಾಡಿದ್ದ 90ಮೀ 14 ಕೇಸ್ (೧೨೦ಲೀ) ಮದ್ಯವನ್ನು ವಶಕ್ಕೆ ಪಡೆದು ಮೂವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಪತ್ತೆಗೆ ಈಗಾಗಲೇ ಬಲೆ ಬೀಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಶ್ರೀ ಕ್ಷೇತ್ರವನ್ನು ಮದ್ಯಪಾನ ಮುಕ್ತ ಕ್ಷೇತ್ರವನ್ನಾಗಿ ಘೋಷಣೆ ಮಾಡಿದ್ದಾರೆ. ಆದರೂ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ಬಗ್ಗೆ ಪ್ರಕರಣಗಳು ದಾಖಲಾಗಿತ್ತು. ಈ ನಿಟ್ಟಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ಕೊಂಚಮಟ್ಟಿಗೆ ಇಳಿಕೆಯಾಗಿತ್ತು. ಇದೀಗ 14 ಕೇಸ್ ಮಧ್ಯದ ಪೌಚ್ ಗಳನ್ನು ಸಾಗಣೆ ಮಾಡುತ್ತಿರುವವರು ಯಾರು? ಎಂಬ ಪ್ರಶ್ನೆ ಕಾಡುತ್ತಿದೆ. ತಾಳು ಬೆಟ್ಟದಲ್ಲಿ ಪ್ಲಾಸ್ಟಿಕ್ ಚೆಕ್ಪೋಸ್ಟ್ ಇದ್ದರು ಇಷ್ಟು ಪ್ರಮಾಣದಲ್ಲಿ ಅಕ್ರಮವಾಗಿ ಮಧ್ಯ ಯಾವ ರೀತಿ ಸಾಗಾಣೆ ಯಾಗುತ್ತಿದೆ ಎಂಬುವುದು ಸಹ ಯಕ್ಷಪ್ರಶ್ನೆಯಾಗಿದೆ. ಇನ್ನು ಮುಂದಾದರು ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಶ್ರೀ ಕ್ಷೇತ್ರದಲ್ಲಿ ಶಾಶ್ವತವಾಗಿ ಮದ್ಯ ಮಾರಾಟವನ್ನು ನಿಲ್ಲಿಸುವರು ಕಾದು ನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago