ಚಾಮರಾಜನಗರ

ಅಕ್ರಮ ಗಾಂಜಾ,ನಾಡ ಬಂದೂಕು ಶೇಖರಣೆ : ಓರ್ವ ಪೊಲೀಸ್‌ ವಶಕ್ಕೆ

ಹನೂರು : ಅಕ್ರಮ ಗಾಂಜಾ ಹಾಗೂ ನಾಡ ಬಂದೂಕು ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯುವಲ್ಲಿ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ.

ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದ ವೆಂಕಟರಾಜು ಬಂಧಿತ ಆರೋಪಿಯಾಗಿದ್ದಾನೆ.

ಘಟನೆಯ ವಿವರ
ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಸ್ತೂರು ಗ್ರಾಮದ ವೆಂಕಟರಾಜು ಮನೆಯಲ್ಲಿ ಅಕ್ರಮ ಒಣಗಾಂಜಾ ಹಾಗೂ ನಾಡ ಬಂದೂಕು ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದಾಗ ಮನೆಯಲ್ಲಿ 160 ಗ್ರಾಂ ಒಣ ಗಾಂಜಾ ಹಾಗೂ ನಾಡ ಬಂದೂಕು ಇರುವುದು ಪತ್ತೆಯಾಗಿದೆ ತಕ್ಷಣ ಮಾಲು ಸಮೇತ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ದಾಳಿಯಲ್ಲಿ ಪ್ರೊಫೆಷನರಿ ಎ.ಸಿ. ಎಫ್ ಸಂದೀಪ್ ಕುಮಾರ್, ಡಿ ಆರ್ ಎಫ್ ಶಿವನಗೌಡ, ಪೊಲೀಸ್ ಸಿಬ್ಬಂದಿಗಳಾದ ಸಿದ್ದರಾಮಯ್ಯ, ರಮೇಶ್, ನಂಜುಂಡಸ್ವಾಮಿ, ರವಿ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

2 mins ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

42 mins ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

2 hours ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

3 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

4 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

4 hours ago