ಚಾಮರಾಜನಗರ

ಹೊಗೇನಕಲ್‌ ಫಾಲ್ಸ್‌ನಲ್ಲಿ ಅಕ್ರಮ ಮದ್ಯ ಮಾರಾಟ ; ಅಧಿಕಾರಿಗಳ ಮೌನ?

ಹನೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಫಾಲ್ಸ್ ನಲ್ಲಿ ಪ್ರವಾಸಿಗರಿಗೆ ರಾಜಾರೋಷವಾಗಿಯೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಸಂಬಂಧಪಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೇ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಹೊಗೇನಕಲ್ ಫಾಲ್ಸ್ ನ ಕೆಲವರು ಅಕ್ರಮ ಮಧ್ಯ ಮಾರಾಟವನ್ನು ದಂಧೆಯಾಗಿ ಮಾಡಿಕೊಂಡಿದ್ದಾರೆ.

ಕರ್ನಾಟಕದ ನಯಾಗರ ಫಾಲ್ಸ್ ಎಂದೇ ಪ್ರಸಿದ್ಧಿ ಪಡೆದಿರುವ ಹೊಗೇನಕಲ್ ಫಾಲ್ಸ್ ಪ್ರವಾಸಿ ತಾಣವಾಗಿದ್ದು, ಇಲ್ಲಿ ತೆಪ್ಪ ವಿಹಾರಕ್ಕೆ ಅವಕಾಶ ಕಲ್ಪಿಸಲಾಗಿದೆ . ಹಾಗಾಗಿ ಇಲ್ಲಿಗೆ ಕರ್ನಾಟಕ ಹಾಗೂ ತಮಿಳುನಾಡಿನ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ವಾರಾಂತ್ಯದ ದಿನಗಳಲ್ಲಿ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಇದರಲ್ಲಿ ಕೆಲ ಯುವಕರು ನಗರ ಪ್ರದೇಶಗಳಿಂದ ಮೋಜು ಮಸ್ತಿಗಾಗಿಯೇ ಆಗಮಿಸುತ್ತಾರೆ. ಇದರ ಲಾಭವನ್ನು ಪಡೆದ ಸಮೀಪದ ಮಾರಿಕೊಟ್ಟಾಯ ಗ್ರಾಮದ ಕೆಲ ಸ್ಥಳೀಯರು ಅಕ್ರಮವಾಗಿ ಮದ್ಯ ಸಂಗ್ರಹಿಸಿಕೊಂಡು ಪ್ರವಾಸಿಗರು ತೆಪ್ಪದಲ್ಲಿ ವಿಹಾರದಲ್ಲಿ ಇರುವಾಗಲೇ ಸ್ಥಳಕ್ಕೆ ತೆರಳಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಕೆಲ ಪ್ರವಾಸಿಗರು ತೆಪ್ಪ ವಿಹಾರದಲ್ಲಿಯೇ ಮದ್ಯ ಸೇವಿಸಿ ಮೋಜು ಮಸ್ತಿಯಲ್ಲಿ ತೊಡಗುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಕುಡಿದ ಅಮಲಿನಲ್ಲಿ ಪ್ರಾಣಾಪಾಯ ಸಂಭವಿಸಿದರೆ ಯಾರು ಹೊಣೆ? ಎಂಬ ಪ್ರಶ್ನೆ ಮೂಡಿದೆ.

ಫಾಲ್ಸ್ನಲ್ಲಿ ಪ್ರವಾಸಿಗರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಅಬಕಾರಿ, ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿದಿದೆ ಎಂದು ಹೇಳಲಾಗುತ್ತಿದೆ. ಆದರೆ ಯಾವುದೇ ಕ್ರಮಕೈಗೊಳ್ಳದೇ ಮೌನ ವಹಿಸಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವುದರ ಮೂಲಕ ಫಾಲ್ಸ್ ನಲ್ಲಿ ಕಾನೂನು ಬಾಹಿರ ಚಟುವಟಿಕೆಗೆ ಕಡಿವಾಣ ಹಾಕುವರೇ ಕಾದುನೋಡಬೇಕಿದೆ.

 

ಹೊಗೆನಕಲ್ ಫಾಲ್ಸ್ ನಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಕೂಡಲೇ ಪರಿಶೀಲನೆ ನಡೆಸಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು. ದಯಾನಂದ್, ಅಬಕಾರಿ ನಿರೀಕ್ಷಕ, ಕೊಳ್ಳೇಗಾಲ

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

14 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

14 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

14 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago